Bengaluru News

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾದ ಪತಿ

ಪತ್ನಿಯ ಹತ್ಯೆ ಮಾಡಿ ತುಂಡುತುಂಡು ಮಾಡಿದ ಪತಿ ನಂತರ ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿರುವ ಪತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು

Publisher: Kannada News Today (Digital Media)

  • ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿಸಿ ಪರಾರಿಯಾದ ಪತಿ
  • ಕೌಟುಂಬಿಕ ಕಲಹವೇ ಈ ಅಮಾನವೀಯ ಕೃತ್ಯದ ಹಿಂದಿನ ಕಾರಣವೇ?
  • ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಬಲೆ ಬೀಸಿದ್ದಾರೆ

ಬೆಂಗಳೂರು (Bengaluru): ಬೆಂಗಳೂರು ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿ ಪ್ರದೇಶದಲ್ಲಿ ಭೀಕರ ಘಟನೆ ನಡೆದಿದೆ.

ಮಹಾರಾಷ್ಟ್ರ ಮೂಲದ ರಾಕೇಶ್ (37) ಎಂಬ ವ್ಯಕ್ತಿ ತನ್ನ ಪತ್ನಿ ಗೌರಿ ಸಾಂಬೇಕರ್ (32) ಅವರನ್ನು ಹತ್ಯೆ ಮಾಡಿ, ಶವವನ್ನು ತುಂಡುಮಾಡಿ (suitcase) ಸೂಟ್ ಕೇಸ್ ನಲ್ಲಿ ತುಂಬಿಸಿ ಪರಾರಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾದ ಪತಿ

ಒಂದು ತಿಂಗಳ ಹಿಂದೆ ಈ ದಂಪತಿ ಹೊಸ ಬಾಡಿಗೆ ಮನೆಗೆ ಸ್ಥಳಾಂತರವಾಗಿದ್ದರು. ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ವರ್ಕ್ ಫ್ರಮ್ ಹೋಂ ಮಾಡುತ್ತಿದ್ದರು. ಕೊಲೆ ನಡೆದ ದಿನ, ಹಠಾತ್ತನೆ ಗೌರಿಯ ತವರು ಮನೆಗೆ ಕರೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುಳ್ಳು ಮಾಹಿತಿ ನೀಡಿದ್ದಾನೆ.

ಈ ಮಾತನ್ನು ಕೇಳಿ ಆತಂಕಗೊಂಡ ಗೌರಿಯ ಮನೆಯವರು ಕೂಡಲೇ ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು. ಈ ಬಗ್ಗೆ ಮಾಹಿತಿ ಪಡೆದ ಹುಳಿಮಾವು ಪೊಲೀಸರು ತಕ್ಷಣವೇ ದಂಪತಿಯ ಮನೆಗೆ ತೆರಳಿ ಪರಿಶೀಲಿಸಿದರು.

ಮನೆಯಲ್ಲಿ ಯಾರೂ ಇಲ್ಲದೆ ಬಾಗಿಲು ಲಾಕ್ ಆಗಿದ್ದ ಕಾರಣ, ಬಲವಂತವಾಗಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ, ಬಾತ್‌ರೂಂನಲ್ಲಿದ್ದ (suitcase) ಸೂಟ್ ಕೇಸ್ ನಲ್ಲಿ ತುಂಡುಮಾಡಿದ ಶವ ಪತ್ತೆಯಾಯಿತು.

ಪೊಲೀಸರ ತನಿಖೆ:

ಈ ಭೀಕರ ಘಟನೆ ಬೆಳಕಿಗೆ ಬಂದ ಕೂಡಲೇ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸೌತ್‌ ಈಸ್ಟ್ ಡಿಸಿಪಿ ಸಾರಾ ಫಾತಿಮಾ, ಕ್ಲೂಸ್‌ ಟೀಂ ಕೂಡ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಶವವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ಹಂತಕನ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

Brutal Murder in Bengaluru, Husband Kills Wife and Flees

English Summary

Our Whatsapp Channel is Live Now 👇

Whatsapp Channel

Related Stories