ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲ್, ಧೈರ್ಯ ಇದ್ದರೆ ಸಾಬೀತುಪಡಿಸಲಿ
ಬೆಂಗಳೂರು (Bengaluru): ಬಿಜೆಪಿ ತನ್ನ ಸರ್ಕಾರವನ್ನು ಬೀಳಿಸಲು ಯತ್ನಿಸಿದೆ, ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ನೀಡಿ 50 ಶಾಸಕರನ್ನು ಖರೀದಿಸಲು ಸಂಚು ಮಾಡಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆರೋಪ ಇದೀಗ ಸಂಚಲನ ಮೂಡಿಸಿದೆ.
ಸಿದ್ದರಾಮಯ್ಯ ಆರೋಪಕ್ಕೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಗುರುವಾರ ಸಿದ್ದರಾಮಯ್ಯನವರು ಧೈರ್ಯಇದ್ದರೆ ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.
ಮುಖ್ಯಮಂತ್ರಿಗಳು ತಮ್ಮದೇ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಹಾಗಾಗಿಯೇ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ಒಬ್ಬೊಬ್ಬ ಶಾಸಕನಿಗೆ 50 ಕೋಟಿ ರೂ.ಕೊಡಲು ಯತ್ನಿಸಿದ್ದನ್ನು ಸಾಬೀತುಪಡಿಸಲಿ ಎಂದರು. ಉನ್ನತ ಸ್ಥಾನದಲ್ಲಿರುವ ನಾಯಕನ ನಡವಳಿಕೆಯೂ ಉನ್ನತವಾಗಿರಬೇಕು ಎಂದರು.
ತನಿಖಾ ಸಂಸ್ಥೆಗಳು ಮುಖ್ಯಮಂತ್ರಿಗಳ ಕೈಯಲ್ಲಿದ್ದು, ಆರೋಪಗಳನ್ನು ಏಕೆ ಸಾಬೀತುಪಡಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಆದರೆ, ವಿಜಯೇಂದ್ರ ಅವರ ಸವಾಲಿಗೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಿರಾಕರಿಸಿದರು.
ಮತ್ತೊಂದೆಡೆ, ಬಿಜೆಪಿ ವಿರುದ್ಧದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪವನ್ನು ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಮರ್ಥಿಸಿಕೊಂಡಿದ್ದಾರೆ.
ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸಿದ್ದು ನಿಜ ಎಂದು ಗುರುವಾರ ಹೇಳಿದರು. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಶಾಸಕರನ್ನು ಖರೀದಿಸಲು ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.
By Vijayendra challenges CM Siddaramaiah in Bengaluru
Our Whatsapp Channel is Live Now 👇