Bangalore NewsKarnataka News

ಬೆಂಗಳೂರು ಜನತೆಯ ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ

ಮಂಡ್ಯ (Mandya): ಬೆಂಗಳೂರಿನ (Bengaluru) ಜನತೆಗೆ ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ ನೀಡಲಾಗಿದ್ದು, 6ನೇ ಹಂತದ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ 5ನೇ ಹಂತದ ಕಾವೇರಿ ನೀರು (Cauvery Water) ಹಂಚಿಕೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಸಿಎಂ ಡಿ.ಕೆ.ಶಿವಕುಮಾರ್ ಜಂಟಿಯಾಗಿ ಚಾಲನೆ ನೀಡಿದರು.

ಬೆಂಗಳೂರು ಜನತೆಯ ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ

ಬೆಂಗಳೂರು ಬನ್ನೇರುಘಟ್ಟಕ್ಕೆ ಸಾಗಿಸುತ್ತಿದ್ದ ಕಾಡುಪ್ರಾಣಿಗಳ ಟ್ರಕ್ ಪಲ್ಟಿ

ಬೆಂಗಳೂರಿನ (Bengaluru Cauvery Water) ಜನತೆಗೆ ಸಂಪೂರ್ಣ ಕುಡಿಯುವ ನೀರು ಒದಗಿಸಲು ಶ್ರಮಿಸಲಾಗುತ್ತಿದೆ ಎಂದು ಸಿಎಂ ಹೇಳಿದರು. 6ನೇ ಹಂತಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರೂ. 7,200 ಕೋಟಿ ಅಗತ್ಯವಿದೆ. ಇದಕ್ಕೂ ಮುನ್ನ ಜಪಾನಿನ ಜೈಕಾ ಸಂಸ್ಥೆಯ ಆರ್ಥಿಕ ನೆರವಿನಿಂದ 5ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿರುವುದಾಗಿ ತಿಳಿಸಿದರು.

ಇದಕ್ಕಾಗಿ ರೂ. 4,336 ಕೋಟಿ ವೆಚ್ಚ ಮಾಡಲಾಗಿದೆ ಎಂದರು. 1974ರಿಂದ ನಗರದ ನಿವಾಸಿಗಳಿಗೆ ಕಾವೇರಿ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು. ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಕೊಡಲಾಗುವುದು. ಕರ್ನಾಟಕಕ್ಕೆ (Karnataka) ಕೇಂದ್ರ ಸರ್ಕಾರ ಎಲ್ಲ ರೀತಿಯಿಂದಲೂ ಅನ್ಯಾಯ ಮಾಡಿದೆ, ಆದರೆ ಬಿಜೆಪಿ, ಜೆಡಿಎಸ್ ಮಾತನಾಡುತ್ತಿಲ್ಲ ಎಂದರು.

ಬೆಂಗಳೂರು ಮಳೆ: ಸರ್ಕಾರ ಪರಿಸ್ಥಿತಿ ನಿಭಾಯಿಸಲಿದೆ ಎಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆಯ ಸಮಗ್ರ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಈ ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಲಾಭವಾಗಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಎನ್.ಚಲುವರಾಯ ಸ್ವಾಮಿ, ರಾಮಲಿಂಗಾರೆಡ್ಡಿ, ಶಾಸಕರಾದ ವಿಶ್ವನಾಥ್, ಸಿಎಂ ಹಾಗೂ ಡಿಸಿಎಂ ಭಾಗವಹಿಸಿದ್ದರು

Cauvery 5th stage scheme drinking water for the people of Bengaluru

Our Whatsapp Channel is Live Now 👇

Whatsapp Channel

Related Stories