Ration Card : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡು ಕೂಡ ನಮ್ಮ ದೇಶದ ಬಡಜನರಿಗೆ ನೀಡುವ ಪ್ರಮುಖವಾದ ಸೌಲಭ್ಯಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದು. ಬಡತನದ ರೇಖೆಗಿಂತ ಮೇಲಿರುವವರಿಗೆ APL ರೇಷನ್ ಕಾರ್ಡ್, ಬಡತನದ ರೇಖೆಗಿಂತ ಕೆಳಗಿರುವವರಿಗೆ BPL ರೇಷನ್ ಕಾರ್ಡ್ ಗಳನ್ನು (Ration Card) ವಿತರಣೆ ಮಾಡುತ್ತದೆ. ಅವರ ಅರ್ಹತೆಯ ಅನುಸಾರ ಈ ಕಾರ್ಡ್ ಗಳನ್ನು ಪಡೆಯಲು ಜನರು ಸರ್ಕಾರಕ್ಕೆ ಅರ್ಜಿ ಸಲ್ಲಿಸಬೇಕು.
ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಬಿಡುಗಡೆ! ಈ ಜಿಲ್ಲೆಯ ಮಹಿಳೆಯರ ಖಾತೆಗೆ ಮೊದಲು
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ಮತ್ತು ಅನುಕೂಲ ಎರಡು ಕೂಡ ಸಿಗುತ್ತದೆ. ಅದರಲ್ಲೂ ಈಗ ನಮ್ಮ ರಾಜ್ಯದಲ್ಲಿ ಸರ್ಕಾರದ ಉಚಿತ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಉಚಿತ ಅಕ್ಕಿ, ಆಹಾರ ಪದಾರ್ಥಗಳು ಮಾತ್ರವಲ್ಲದೇ ಇನ್ನು ಅನೇಕ ಸೌಲಭ್ಯಗಳು ಅವರಿಗೆ ಸರ್ಕಾರದ ವತಿಯಿಂದ ಸಿಗುತ್ತದೆ..
ಸರ್ಕಾರದಿಂದ ಹೊಸ ರೂಲ್ಸ್!
ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಎಂದು ಅನೇಕ ಜನರು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲೆಕ್ಷನ್ ಹಾಗೂ ಇನ್ನಿತರ ಕಾರಣಗಳಿಂದ ಹೊಸ ಅರ್ಜಿಗಳನ್ನು ಪರಿಶೀಲಿಸಿ, ರೇಶನ್ ಕಾರ್ಡ್ ವಿತರಣೆ ಮಾಡುವ ಕೆಲಸ ತಡವಾಗಿತ್ತು. ಆದರೆ ಈಗ ಜನರಿಗೆ ಸರ್ಕಾರದ ಕಡೆಯಿಂದ ಒಂದು ಹೊಸ ನ್ಯೂಸ್ ಸಿಕ್ಕಿದೆ. ಈ ಹೊಸ ಸುದ್ದಿ ಹಾಗೂ ಬಿಗ್ ಅಪ್ಡೇಟ್ ಬಗ್ಗೆ ಈಗ ಪೂರ್ತಿಯಾಗಿ ತಿಳಿಯೋಣ..
ಇಂತಹ ಜನರಿಗೆ ಸುಲಭವಾಗಿ ಸಿಗಲಿದೆ ಬಿಪಿಎಲ್ ರೇಷನ್ ಕಾರ್ಡ್! ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಸರ್ಕಾರದಿಂದ ಬೇಸರದ ಸುದ್ದಿ
ಕಳೆದ ವರ್ಷ ನಮ್ಮ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕಿಂತ ಮೊದಲೇ ಸುಮಾರು 2.95 ಲಕ್ಷ ಜನರು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದರು, ಈಗಾಗಲೇ ಅರ್ಜಿ ಸಲ್ಲಿಸಿರುವವರ ಅರ್ಜಿ ಪರಿಶೀಲನೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗ ರೇಷನ್ ಕಾರ್ಡ್ ವಿತರಣೆ ನಡೆಯಲಿದೆ. ಆದರೆ ಅದರ ಜೊತೆಗೆ ಮತ್ತೊಂದು ಬೇಸರದ ಸುದ್ದಿ ಕೂಡ ಕೇಳಿಬಂದಿದ್ದು, ಈ ವರ್ಷ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶ ಇಲ್ಲ ಎಂದು ಮಾಹಿತಿ ಸಿಕ್ಕಿದೆ. ಇದು ರಾಜ್ಯದ ಆಹಾರ ಇಲಾಖೆಯಿಂದ ಬಂದಿರುವ ಅಧಿಕೃತ ಮಾಹಿತಿ ಆಗಿದೆ.
ಇವರಿಗೆ ಮಾತ್ರ ಸಿಗಲಿದೆ ರೇಷನ್ ಕಾರ್ಡ್
ಈಗಾಗಲೇ ಅರ್ಜಿ ಸಲ್ಲಿಸಿರುವ 2.95 ಲಕ್ಷ ಜನರ ಪೈಕಿ ಯಾರಿಗೆಲ್ಲಾ ಹೃದಯದ ಸಮಸ್ಯೆ, ಕ್ಯಾನ್ಸರ್ ಹಾಗೂ ಇನ್ನಿತರ ಗಂಭೀರ ಆರೋಗ್ಯ ಸಮಸ್ಯೆಗಳು ಇದೆಯೋ ಅಂಥವರಿಗೆ ಮಾತ್ರ ಆದಷ್ಟು ಬೇಗ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ಸಿಕ್ಕಿದೆ.
ಗೃಹಜ್ಯೋತಿ ಯೋಜನೆ ಇದ್ರೂ ಕರೆಂಟ್ ಬಿಲ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!
ಅರ್ಜಿ ಸಲ್ಲಿಸಿರುವ ಬೇರೆಯವರಿಗೆ ಸ್ವಲ್ಪ ತಡವಾಗಿ ರೇಷನ್ ಕಾರ್ಡ್ ನೀಡಲಾಗುತ್ತದೆ, ಇನ್ನು ಹೊಸದಾಗಿ ಅರ್ಜಿ ಸಲ್ಲಿಸಲು ಸಧ್ಯಕ್ಕೆ ಅವಕಾಶ ಕೊಡಲಾಗುವುದಿಲ್ಲ ಎಂದು ಮಾಹಿತಿ ನೀಡಿದೆ ಸರ್ಕಾರ.
From now on only Such People will get a new ration card
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.