Bengaluru Traffic Jam; ಮಳೆ ಅಬ್ಬರ, ಟ್ರಾಫಿಕ್ ಜಾಮ್.. ಬೆಂಗಳೂರಿನ ಜನತೆ ನರಕಯಾತನೆ!
Traffic Jam in Bengaluru : ಮಳೆಯ ಅಬ್ಬರಕ್ಕೆ ಕರ್ನಾಟಕದ ರಾಜಧಾನಿ ಬೆಂಗಳೂರು ತತ್ತರಿಸಿದೆ. ಐಟಿ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ರಸ್ತೆಗಳೆಲ್ಲ ಜಲಾವೃತವಾಗಿವೆ.
Traffic Jam in Bengaluru : ಮಳೆಯ ಅಬ್ಬರಕ್ಕೆ ಕರ್ನಾಟಕದ ರಾಜಧಾನಿ ಬೆಂಗಳೂರು ತತ್ತರಿಸಿದೆ. ಐಟಿ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ರಸ್ತೆಗಳೆಲ್ಲ ಜಲಾವೃತವಾಗಿವೆ. ಇದರಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್ ಗಳಲ್ಲಿ ಒಂದಾದ ಮಾರತ್ತಹಳ್ಳಿ-ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಸೋಮವಾರ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಂಗಳೂರು ನಿವಾಸಿಗಳು, ವಿಶೇಷವಾಗಿ ಕಚೇರಿಗೆ ಹೋಗುವವರು ನಾಲ್ಕು ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕಿಕೊಂಡರು.
ಐಟಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದರಿಂದ ನೂರಾರು ವಾಹನ ಸವಾರರು ಹಾಗೂ ಚಾಲಕರು ಕಚೇರಿಗಳಿಗೆ ತೆರಳಲು ತೀವ್ರ ತೊಂದರೆ ಅನುಭವಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ ರಿಚ್ಮಂಡ್ ರಸ್ತೆಯಲ್ಲಿ ನೀರು ಸಂಗ್ರಹಗೊಂಡಿರುವುದರಿಂದ ಅಧಿಕಾರಿಗಳು ಹಾಗೂ ಮುಖಂಡರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತುರ್ತು ಪರಿಸ್ಥಿತಿಯ ಹೊರತು ಮನೆಯಿಂದ ಹೊರಗೆ ಬರದಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ. ಈ ನಡುವೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಸೇರಿದಂತೆ 14 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
Massive Traffic Jam in Bengaluru
#WATCH | Karnataka: Massive traffic jam on Marathahalli-Silk Board junction road in Bengaluru amid severe waterlogging caused due to heavy rainfall pic.twitter.com/KUnF0cuPtR
— ANI (@ANI) September 5, 2022
Follow us On
Google News |