ಕಲುಷಿತ ನೀರು ಕುಡಿದು ಮೃತಪಟ್ಟ 3 ಮಂದಿಯ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸಚಿವ ಪ್ರಭು ಚವ್ಹಾಣ್ ಮಾಹಿತಿ
ಯಾದಗಿರಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ 3 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಬೆಂಗಳೂರು (Bengaluru): ಯಾದಗಿರಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ 3 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
14ರಂದು ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 3 ಮಂದಿ ಪ್ರಾಣ ಕಳೆದುಕೊಂಡಿದ್ದರು. ಮನೆಗಳಿಗೆ ಸರಬರಾಜಾಗುತ್ತಿದ್ದ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಸೇರಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಕುಡಿದು ಮೃತಪಟ್ಟ 3 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟ 3 ಮಂದಿಯ ಕುಟುಂಬಗಳನ್ನೂ ಭೇಟಿ ಮಾಡಿ ಪರಿಹಾರ ನೀಡಲಾಗುವುದು. ಅದೇ ರೀತಿ ಕಲುಷಿತ ನೀರು ಕುಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಲಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ಯಾದಗಿರಿ ಜಿಲ್ಲೆಗೆ ತೆರಳುತ್ತಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
Relief Fund of 5 lakh each to the families of 3 persons who died after drinking contaminated water
Follow us On
Google News |
Advertisement