Bangalore News
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ, ಹೈಕಮಾಂಡ್ ನಾಯಕರ ಜತೆ ಚರ್ಚೆ
ಬೆಂಗಳೂರು (Bengaluru): ಸಿಎಂ ಸಿದ್ದರಾಮಯ್ಯ (Siddaramaiah) ಗುರುವಾರ ದಿಢೀರ್ ದೆಹಲಿಗೆ ತೆರಳಿದ್ದಾರೆ. ಎರಡು ದಿನಗಳ ಕಾಲ ದೆಹಲಿಯಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರ ಎಐಸಿಸಿ ಸಭೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಆಡಳಿತದ ಸಿಎಂಗಳನ್ನು ಕರೆಯಲಾಗಿದೆ.
ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮುಂತಾದ ವಿಷಯಗಳ ಕುರಿತು ಹೈಕಮಾಂಡ್ ನಾಯಕರ ಜತೆ ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Siddaramaiah visits Delhi, discusses with high command leaders