Bangalore News

ಬೆಂಗಳೂರು: ವಕ್ಫ್ ಭೂ ವಿವಾದ, ರೈತರಿಗೆ ನೀಡಿದ್ದ ನೋಟಿಸ್ ವಾಪಸ್: ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು (Bengaluru): ವಕ್ಫ್ ಜಮೀನು ವಿವಾದಕ್ಕೆ (Waqf land Row) ಸಂಬಂಧಿಸಿದಂತೆ ರೈತರಿಗೆ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣವೇ ಹಿಂಪಡೆಯುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM Siddaramaiah) ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

Karnataka Cm Siddaramaiah

ಬೆಂಗಳೂರಿನಲ್ಲಿ 80 ಜನರಿಗೆ ಗಾಯ, ಹಬ್ಬಕ್ಕೆ ಪಟಾಕಿ ಸಿಡಿಸಲು ಹೋಗಿ ಬಾಳು ಕತ್ತಲು

ವಕ್ಫ್ ಆಸ್ತಿಗೆ ಸಂಬಂಧಿಸಿದ ಭೂ ದಾಖಲೆಗಳಿಗೆ ಸಂಬಂಧಿಸಿದಂತೆ ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರೈತರು ಯಾವುದೇ ಸಮಸ್ಯೆ ಎದುರಿಸಬಾರದು ಎಂದು ಸಿಎಂಒ ಕಚೇರಿ ತಿಳಿಸಿದೆ.

ಇತ್ತೀಚೆಗಷ್ಟೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರೈತರನ್ನು (Farmers) ಒಕ್ಕಲೆಬ್ಬಿಸುವುದಿಲ್ಲ, ಅವರಿಗೆ ನೀಡಿರುವ ನೋಟಿಸ್ ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ.

Waqf land Row, notice given to farmers withdrawn, CM Siddaramaiah orders

Our Whatsapp Channel is Live Now 👇

Whatsapp Channel

Related Stories