Business News

ಈ ಯೋಜನೆಯಲ್ಲಿ ಸಿಗುತ್ತೆ ಉಚಿತ ಹೊಲಿಗೆ ಯಂತ್ರ ಹಾಗೂ ಕಡಿಮೆ ಬಡ್ಡಿಗೆ ಸಾಲ

Loan Scheme : ಕಳೆದ ವರ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ (PM Narendra Modi ji) ಅವರು ವಿಶ್ವಕರ್ಮ ಯೋಜನೆಗೆ (pm Vishwakarma scheme) ಚಾಲನೆ ನೀಡಿದರು. ಈ ಯೋಜನೆಯ ಅಡಿಯಲ್ಲಿ ಸಾಕಷ್ಟು ಯುವಕ ಯುವತಿಯರು ತಮ್ಮ ಸ್ವಂತ ಉದ್ಯಮ (own business) ಆರಂಭಿಸಲು ಸಾಲ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಅತಿ ಕಡಿಮೆ ಬಡ್ಡಿ ದರದಲ್ಲಿ ಸ್ವಂತ ಉದ್ಯಮ ಮಾಡುವುದಕ್ಕೆ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ (Loan) ನೀಡಲಾಗುತ್ತದೆ ಇದರ ಜೊತೆಗೆ ಉಚಿತ ಹೊಲಿಗೆ ಯಂತ್ರ (free sewing machine) ವಿತರಣೆಯನ್ನು ಮಾಡಲಾಗುತ್ತಿದೆ.

Application invited for free sewing machine distribution in this scheme

ಕ್ರೆಡಿಟ್ ಕಾರ್ಡ್ ಬಳಕೆಗೂ ಮುನ್ನ ಈ ವಿಚಾರ ತಿಳಿದಿರಲಿ; ಇಲ್ಲವಾದರೆ ನಷ್ಟ ಗ್ಯಾರಂಟಿ!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳುವುದು ಹೇಗೆ?

ವಿಶ್ವಕರ್ಮ ಯೋಜನೆಯ ಅಡಿಯಲ್ಲಿ 18ಕ್ಕೂ ಹೆಚ್ಚಿನ ಕುಶಲಕರ್ಮಿ ಕೆಲಸ ಮಾಡುವ ಅಸಂಘಟಿತ ವಲಯದ ಜನರು ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಮೂರು ಲಕ್ಷ ರೂಪಾಯಿಗಳ ವರೆಗೆ ಸಾಲ ನೀಡಲಾಗುವುದು. ಇದಕ್ಕೆ ಕೇವಲ 5% ನಷ್ಟು ಬಡ್ಡಿ ನಿಗದಿಪಡಿಸಲಾಗಿದೆ.

ಇನ್ನು ಸಾಂಪ್ರದಾಯಿಕ ಕುಶಲಕರ್ಮಿ ಕೆಲಸ ಮಾಡಿಕೊಂಡು ಬರುತ್ತಿರುವವರು ತಮ್ಮ ಉದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಿಕೊಳ್ಳಲು ಅಗತ್ಯ ಇರುವ ತರಬೇತಿಯನ್ನು ಕೂಡ ಈ ಯೋಜನೆಯ ಸದಸ್ಯರಿಗೆ ನೀಡಲಾಗುತ್ತದೆ.

ತರಬೇತಿಯ ಸಂದರ್ಭದಲ್ಲಿ ತರಬೇತಿಯಲ್ಲಿ ಇರುವಷ್ಟು ದಿನ, ಪ್ರತಿದಿನ 500 ರೂಪಾಯಿಗಳನ್ನು ಸರ್ಕಾರ ಅಭ್ಯರ್ಥಿಗಳಿಗೆ ನೀಡುತ್ತಿದೆ. ಇನ್ನು 15,000 ಪಡೆದುಕೊಂಡು ನಿಮ್ಮ ಉದ್ಯಮವನ್ನು ಇನ್ನಷ್ಟು ವಿಸ್ತರಿಸಿಕೊಳ್ಳಬಹುದು.

ಕೇವಲ 7 ಸಾವಿರಕ್ಕೆ ಮನೆಗೆ ತನ್ನಿ ಹೀರೋ ಬೈಕ್! ಖರೀದಿಗೆ ಮುಗಿಬಿದ್ದ ಜನತೆ

Loan Schemeಇನ್ನು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ನೇರವಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ವೆಬ್ಸೈಟ್ಗೆ ಹೋಗಿ ರಿಜಿಸ್ಟರ್ ಆಗಿ ಅರ್ಜಿ ಸಲ್ಲಿಸಬಹುದು.

ಹದಿನೈದು ಸಾವಿರ ರೂಪಾಯಿಗಳನ್ನು ಹೊಲಿಗೆ ಯಂತ್ರ ಖರೀದಿಗಾಗಿ ಸರ್ಕಾರ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತದೆ. ನೀವು ಸರ್ಕಾರದಿಂದ ಹದಿನೈದು ಸಾವಿರ ರೂಪಾಯಿಗಳನ್ನು ಪಡೆದುಕೊಂಡು ನಿಮ್ಮದೇ ಆಗಿರುವ ಸ್ವಂತ ಹೊಲಿಗೆ ಯಂತ್ರವನ್ನು ಖರೀದಿ ಮಾಡಿ ಹೊಲಿಗೆ ವೃತ್ತಿಯನ್ನು ಮಾಡಬಹುದು. ಕೇವಲ ಮಹಿಳೆಯರು ಮಾತ್ರವಲ್ಲದ ಪುರುಷರು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.

ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್, ಉಚಿತ ವಿದ್ಯುತ್! ಮತ್ತೆರಡು ಗ್ಯಾರಂಟಿ ಯೋಜನೆ

ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೊಲಿಗೆ ಯಂತ್ರವನ್ನು ವರ್ಷದಲ್ಲಿ ಎರಡು ಬಾರಿ ವಿತರಣೆ ಮಾಡಲಾಗುತ್ತದೆ. ಇದೀಗ ಏಪ್ರಿಲ್ ತಿಂಗಳಿನಲ್ಲಿ ಹೊಲಿಕೆ ಯಂತ್ರಕ್ಕಾಗಿ ನಿಮ್ಮ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುವುದು.

ನೀವು ಹತ್ತಿರದ ಸೇವಾ ಕೇಂದ್ರಗಳಿಗೆ ಹೋಗಿ ಅಥವಾ ಸೈಬರ್ ಸೆಂಟರ್ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ನಲ್ಲಿ ನಿಮ್ಮ ಮನೆಯಲ್ಲಿಯೇ ಕುಳಿತು ಅರ್ಜಿ ಸಲ್ಲಿಸಬಹುದು. ಮೊದಲಿಗೆ ಅರ್ಜಿ ಪರಿಶೀಲನೆ ನಡೆಸಿ ನೀವು ವಿಶ್ವಕರ್ಮ ಯೋಜನೆಯ ಸದಸ್ಯರಾಗಿದ್ದರೆ ನಿಮ್ಮ ಅರ್ಜಿ ಪರಿಶೀಲನೆ ಮಾಡಿ ಅರ್ಜಿ ಸರಿಯಾಗಿ ಇದ್ದರೆ ನಿಮ್ಮ ಖಾತೆಗೆ (Bank Account) ನೇರವಾಗಿ ಹಣ ಜಮಾ ಮಾಡಲಾಗುವುದು.

ಆಸ್ತಿ ಖರೀದಿ ಹಾಗೂ ನೋಂದಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು! ಯಾಕೆ ಗೊತ್ತಾ?

In this scheme you will get free sewing machine and low interest loan

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories