ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗುತ್ತೆ ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಸಿ
Education scholarship : ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಸರ್ಕಾರ ವಿದ್ಯಾರ್ಥಿವೇತನ (Government scholarship) ನೀಡಲು ಮುಂದಾಗಿದ್ದು, ಅರ್ಹ ವಿದ್ಯಾರ್ಥಿ (students) ಗಳು ತಕ್ಷಣ ಅರ್ಜಿ ಸಲ್ಲಿಸಿ ವಾರ್ಷಿಕವಾಗಿ ಸಿಗುವ ಸಹಾಯಧನವನ್ನು ಸರ್ಕಾರದಿಂದ ಪಡೆದುಕೊಳ್ಳಬಹುದಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ (Scholarship for after matric education)
ಸಮಾಜ ಕಲ್ಯಾಣ ಇಲಾಖೆ 2023 – 24ನೇ (department of social welfare) ಸಾಲಿನ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ವಿದ್ಯಾರ್ಥಿ ವೇತನ ನಿಗದಿಪಡಿಸಿದೆ.
ಬೆಂಗಳೂರು ದಕ್ಷಿಣ (Bengaluru north) ತಾಲೂಕು ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಶಾಲಾ ಕಾಲೇಜುಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುತ್ತಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಅಡಿಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಮ್ಮ ಬ್ಯಾಂಕ್ ಖಾತೆ ನೀವು ಬಳಸದೇ ಇದ್ದರೆ ಆ ಹಣ ಯಾರ ಪಾಲಾಗುತ್ತೆ ಗೊತ್ತಾ?
ಅರ್ಜಿ ಸಲ್ಲಿಸುವುದು ಹೇಗೆ? (How to apply)
ಬೆಂಗಳೂರು ದಕ್ಷಿಣ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮಹಾ ನಿರ್ದೇಶಕರು ತಿಳಿಸಿರುವಂತೆ, ವಿದ್ಯಾರ್ಥಿಗಳು, https://ssp.postmatric.karnataka.gov.in ವೆಬ್ ಸೈಟ್ ಗೆ ಹೋಗಿ ಆನ್ಲೈನ್ ಮೂಲಕವೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅಥವಾ ಆಫ್ ಲೈನ್ ಮೂಲಕ ಈ ಕೆಳಕಂಡ ವಿಳಾಸಕ್ಕೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಕಳುಹಿಸಬಹುದು.
ಚಿನ್ನದ ಬೆಲೆ ನಿರಂತರ ಇಳಿಕೆ, ಚಿನ್ನಾಭರಣ ಖರೀದಿಗೆ ಅಂಗಡಿ ಮುಂದೆ ಜನವೋ ಜನ
ವಿಳಾಸ : (address)
ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್ ಕರಿಯಪ್ಪ ಮುಖ್ಯ ರಸ್ತೆ , ಬನಶಂಕರಿ, ಬೆಂಗಳೂರು – 560070
ದೂರವಾಣಿ ಸಂಖ್ಯೆ: (contact number) 080-26711096
ರಾಜ್ಯದ ಮುಕ್ತ ವಿಶ್ವವಿದ್ಯಾಲಯ ದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!
ಬೆಂಗಳೂರಿನ ಬಾಪೂಜಿ ನಗರದಲ್ಲಿರುವ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (open University) ಪ್ರಾದೇಶಿಕ ಕೇಂದ್ರ ಇಲ್ಲಿ 2023 24ನೇ ಶೈಕ್ಷಣಿಕ ವರ್ಷದ ದ್ವಿತೀಯ ಮತ್ತು ತೃತೀಯ ವರ್ಷದ ಪ್ರವೇಶಾತಿ ನವೀಕರಣ ದಿನಾಂಕವನ್ನು ಜನವರಿ 2024ರ ವರೆಗೆ ವಿಸ್ತರಣೆ ಮಾಡಲಾಗಿತ್ತು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಮುಕ್ತ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ಶಿಪ್; ಅಪ್ಲೈ ಮಾಡಲು ಇಲ್ಲಿದೆ ಡೈರೆಕ್ಟ್ ಲಿಂಕ್
ಸಂಪರ್ಕಿಸಬೇಕಾದ ವಿಳಾಸ ಮತ್ತು ದೂರವಾಣಿ ಸಂಖ್ಯೆ ಇಲ್ಲಿದೆ!
ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ. ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-560026
ಸಂಪರ್ಕ ಸಂಖ್ಯೆ; 080-26003664
98449 65515
Such students get scholarship from the government