ಹರಿಯಾಣದಲ್ಲಿ ಭೀಕರ ಅಪಘಾತ: ಐವರ ಸಾವು
ಹರಿಯಾಣದ ದಿಲ್ಲಿ-ಜೈಪುರ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ನವದೆಹಲಿ: ಹರಿಯಾಣದ ದಿಲ್ಲಿ-ಜೈಪುರ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರಕ್ಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಬೋವಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ರಾಜಸ್ಥಾನ ಮೂಲದ ಮಾಲು ರಾಮ್ ಉತ್ತರಾಖಂಡದ ಹರಿದ್ವಾರದಲ್ಲಿರುವ ಗಂಗಾ ನದಿಯಲ್ಲಿ ತನ್ನ ತಂದೆಯ ಅವಶೇಷಗಳನ್ನು ಬಿಡಲು ಹೋಗಿದ್ದರು. ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
5 Members Dies In Road Accident In Haryana
Follow Us on : Google News | Facebook | Twitter | YouTube