ಹೆರಿಗೆ ವೇಳೆ ಗರ್ಭಿಣಿ ಸಾವು, ಪೊಲೀಸ್ ಕೇಸ್ ದಾಖಲಿಸುತ್ತಿದ್ದಂತೆ ಮಹಿಳಾ ವೈದ್ಯೆ ಆತ್ಮಹತ್ಯೆ
ಜೈಪುರ : ಹೆರಿಗೆ ವೇಳೆ ಗರ್ಭಿಣಿ ಸಾವನ್ನಪ್ಪಿದ್ದರಿಂದ ಆಕೆಯ ಸಂಬಂಧಿಕರು ಆಸ್ಪತ್ರೆ ಎದುರು ಜಮಾಯಿಸಿ ಪ್ರತಿಭಟಿಸಿದ್ದರು, ಪೊಲೀಸರು ತಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದರಿಂದ ಮನನೊಂದಿದ್ದ ಡಾ.ಅರ್ಚನಾ ಆಸ್ಪತ್ರೆಯ ಮೇಲಿನ ಮಹಡಿಯ ಮನೆಯ ಕೊಠಡಿಯಲ್ಲಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ. ಅರ್ಚನಾ ಮತ್ತು ಅವರ ಪತಿ ರಾಜಸ್ಥಾನದ ದುಸಾ ಜಿಲ್ಲೆಯ ಲಾಲ್ಚೋಟ್ನಲ್ಲಿ ಆಸ್ಪತ್ರೆಯನ್ನು ನಡೆಸುತ್ತಿದ್ದಾರೆ. ಇದೇ ವೇಳೆ ಗರ್ಭಿಣಿಯೊಬ್ಬರು ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದರು. ಹೆರಿಗೆಗೆ ಬಂದ ಮಹಿಳೆಯನ್ನು ಡಾ.ಅರ್ಚನಾ ಪಾಲಿಸುತ್ತಿದ್ದರು ಆದರೆ, ಹೆರಿಗೆ ವೇಳೆ ಗರ್ಭಿಣಿ ಸಾವನ್ನಪ್ಪಿದ್ದಾಳೆ.
ಹೀಗಾಗಿ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆ ಎದುರು ಜಗಳಕ್ಕಿಳಿದಿದ್ದಾರೆ. ಅಲ್ಲದೆ ಗರ್ಭಿಣಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯೆ ಅರ್ಚನಾ ಅವರನ್ನು ಬಂಧಿಸಬೇಕು ಎಂದು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಇದರ ಬೆನ್ನಲ್ಲೇ ಪೊಲೀಸರು ಹೆರಿಗೆ ವೇಳೆ ಗರ್ಭಿಣಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಡಾ.ಅರ್ಚನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೀಗಿರುವಾಗ ಪೊಲೀಸರು ತಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದರಿಂದ ಮನನೊಂದಿದ್ದ ಡಾ.ಅರ್ಚನಾ ಆಸ್ಪತ್ರೆಯ ಮೇಲಿನ ಮಹಡಿಯ ಮನೆಯ ಕೊಠಡಿಯಲ್ಲಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರಿಂದ ಮಹಿಳಾ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪ್ರದೇಶದಲ್ಲಿ ದುರಂತಕ್ಕೆ ಕಾರಣವಾಗಿದೆ.



