Viral Video, ಪಕ್ಷಿ ಉಳಿಸಲು ಮುಂದಾದ ಇಬ್ಬರು ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು
Viral Video, ಪಕ್ಷಿಯನ್ನು ಉಳಿಸಲು ಮುಂದಾದ ಇಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮುಂಬೈ: ಪಕ್ಷಿಯನ್ನು ಉಳಿಸಲು ಮುಂದಾದ ಇಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಈ ದಾರುಣ ಘಟನೆ ನಡೆದಿದೆ.
ಮೇ 30 ರಂದು, 43 ವರ್ಷದ ಅಮರ್ ಮನೀಶ್ ಜರಿವಾಲಾ ಬಾಂದ್ರಾ-ವರ್ಲಿ ಸೀ ಲಿಂಕ್ ಮಾರ್ಗದಲ್ಲಿ ಮಲಾಡ್ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಅವರು ಪ್ರಯಾಣಿಸುತ್ತಿದ್ದ ಕಾರಿನಡಿಯಲ್ಲಿ ಹದ್ದು ಸಿಕ್ಕಿಬಿದ್ದಿತ್ತು. ಕೂಡಲೇ ಕಾರು ನಿಲ್ಲಿಸುವಂತೆ ಚಾಲಕ ಶ್ಯಾಮ್ ಸುಂದರ್ ಕುಮಾರ್ ಗೆ ತಿಳಿಸಿದರು. ನಂತರ ಇಬ್ಬರು ಕಾರಿನಿಂದ ಇಳಿದು ಹದ್ದು ಉಳಿಸಲು ಯತ್ನಿಸಿದರು.
ಮತ್ತೊಂದೆಡೆ, ಮತ್ತೊಂದು ಲೇನ್ನಲ್ಲಿ ವೇಗವಾಗಿ ಬಂದ ಟ್ಯಾಕ್ಸಿ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಇದರೊಂದಿಗೆ ಇಬ್ಬರೂ ಗಾಳಿಯಲ್ಲಿ ಹಾರಿ ನೆಲಕ್ಕೆ ಬಿದ್ದಿದ್ದಾರೆ. ಅಪಘಾತದಲ್ಲಿ ಅಮರ್ ಮನೀಶ್ ಜರಿವಾಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಶ್ಯಾಮ್ ಸುಂದರ್ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಬ್ಬರ ಜೀವ ಕಿತ್ತುಕೊಂಡ ಟ್ಯಾಕ್ಸಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏತನ್ಮಧ್ಯೆ, ಅಪಘಾತದ ಸಮಯದಲ್ಲಿ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
What a tragedy. This is Mumbai’s Bandra Worli Sea Link pic.twitter.com/VSTQz27vqY
— Singh Varun (@singhvarun) June 10, 2022
Man Driver Stop To Rescue Eagle Killed As Taxi Ploughs Into Them On Mumbai Sea Link
Follow us On
Google News |
Advertisement