ಬೆಂಗಳೂರು ಕಟ್ಟಡ ಕಾರ್ಮಿಕನ ಕೊಲೆ ಪ್ರಕರಣ, ಇಬ್ಬರ ಬಂಧನ
ಕಟ್ಟಡ ಕಾರ್ಮಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರು (Bengaluru): ಬೆಂಗಳೂರಿನ ರಾಮಮೂರ್ತಿನಗರ (Bangalore, Ramamurthy Nagar) ಸಮೀಪದ ಮುನೇಶ್ವರನಗರದ ಕಟ್ಟಡ ಕಾರ್ಮಿಕನ ಕೊಲೆ ಪ್ರಕ್ರಣಕ್ಕೆ (Murder Case) ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ (2 Arrested). ಕಟ್ಟಡ ಕಾರ್ಮಿಕನ ಕಳೆದ 2 ದಿನಗಳ ಹಿಂದೆ ಮೃತಪಟ್ಟಿದ್ದಾನೆ.
ಮನೆಗೆ ಬಾರದ ಪತಿಯ ಬಗ್ಗೆ ಆತನ ಪತ್ನಿ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಳು. ಈ ಹಂತದಲ್ಲಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ, ಈ ವೇಳೆ ಕಾರ್ಮಿಕ ಕೆಲಸ ಮಾಡುತ್ತಿದ್ದ ಕಟ್ಟಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ತಲೆಗೆ ವೈರ್ನಿಂದ ಹೊಡೆದು ದುಷ್ಕರ್ಮಿಗಳು ಹತ್ಯೆಗೈದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಕೊಲೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಹಾಗೂ ಕಾರ್ಮಿಕ ಸುಬ್ಬಯ್ಯನನ್ನು ಪೊಲೀಸರು (Ramamurthy Nagar Police) ಬಂಧಿಸಿದ್ದಾರೆ. ಕಟ್ಟಡದಲ್ಲಿದ್ದ ವಿದ್ಯುತ್ ಮೋಟರ್ ಕದ್ದ ಆರೋಪ ಹೊರಿಸಿ ಆತನನ್ನು ಕೊಂದಿರುವುದಾಗಿ ತಿಳಿದುಬಂದಿದೆ. ಅವರನ್ನು ಇಬ್ಬರು ವೈರ್ ನಿಂದ ಹೊಡೆದು ಕೊಂದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ರಾಮಮೂರ್ತಿನಗರ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Police have arrested 2 people in connection with the murder of a construction worker
Follow us On
Google News |