ಗುಂಡೇಟಿನಿಂದ ಗಾಯಗೊಂಡ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ
ಚಂಡೀಗಢ: ಗುಂಡೇಟಿನಿಂದ ಗಾಯಗೊಂಡ ವ್ಯಕ್ತಿಯೊಬ್ಬ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪಂಜಾಬ್ನ ಮೊಹಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೊಹಾಲಿಯ ಜಲ ವಾಯು ವಿಹಾರ್ನ ನಿವಾಸಿ ಕರಣ್ಪಾಲ್ ಶರ್ಮಾ ಅವರು ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಸಮೀಪ ಹ್ಯುಂಡೈ ಕ್ರೆಟಾ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ತಲೆ ಮತ್ತು ಬಾಯಿಯಿಂದ ರಕ್ತ ಸೋರುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಮೃತನ ತಲೆಗೆ ಗುಂಡೇಟಿನ ಗಾಯವಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆತನ ಬಲಗೈಯಲ್ಲಿ ಪಿಸ್ತೂಲ್, ಜೇಬಿನಲ್ಲಿದ್ದ ಒಂಬತ್ತು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಧಿವಿಜ್ಞಾನ ತಂಡವೂ ಅಲ್ಲಿಗೆ ತಲುಪಿತು. ಮೃತನ ಕೈಯಿಂದ ಗುಂಡೇಟಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರ ಆಧಾರದ ಮೇಲೆ ಕರಣ್ಪಾಲ್ ಶರ್ಮಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತನ ತಂದೆ ಸುರೀಂದರ್ ಕುಮಾರ್ ರವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆದರೆ, ಈ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿತ್ತು. ಇತ್ತೀಚೆಗಷ್ಟೇ ಪಂಜಾಬ್ನಲ್ಲಿ ನಡೆಯುತ್ತಿರುವ ಗುಂಡಿನ ದಾಳಿ ಪೊಲೀಸರನ್ನು ತಲ್ಲಣಗೊಳಿಸಿದೆ. ಅಲ್ಲದೆ, ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
Punjab Man Found Dead In Car With Bullet Injury Mohali Cops Suspect Suicide