ಭೀಕರ ಅಪಘಾತ : ಬೈಕ್ ಗೆ ಕಾರು ಡಿಕ್ಕಿ, ಮೂವರು ಸಾವು

ಆಂದ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲಗಡ್ಡದಲ್ಲಿ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸಿದೆ. ಆಲಗಡ್ಡ ನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆರೆ ರಾಜ್ಯ ಆಂದ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲಗಡ್ಡದಲ್ಲಿ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸಿದೆ. ಆಲಗಡ್ಡ ನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಕರ್ನೂಲ್ ನಿಂದ ಕಡಪ ಕಡೆಗೆ ಹೊರಟಿದ್ದ ಕಾರು ಆಲಗಡ್ಡ ಬಳಿ ಟೈರ್ ಸ್ಫೋಟಗೊಂಡಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ನಂತರ ಅದು ಪಲ್ಟಿ ಹೊಡೆದು ಹಾದು ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಶಿರಿವೆಲ್ಲ ಮೂಲದ ಅಫ್ಜಲ್, ಕಲಾಂ ಮತ್ತು ಜಾವೇದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೇ ಬೈಕ್ ನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸುಲೈಮಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೀಕರ ಅಪಘಾತ : ಬೈಕ್ ಗೆ ಕಾರು ಡಿಕ್ಕಿ, ಮೂವರು ಸಾವು - Kannada News

ಮಾಹಿತಿ ಪಡೆದ ನಂತರ ಡಿಎಸ್‌ಪಿ ರಾಜೇಂದ್ರ ಸ್ಥಳಕ್ಕೆ ಆಗಮಿಸಿ ಅಪಘಾತವನ್ನು ಪರಿಶೀಲಿಸಿದರು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೃತದೇಹಗಳನ್ನು ಆಲಗಡ್ಡ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ.

Follow us On

FaceBook Google News

Read More News Today