Crime News

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, ಏಳು ಮಂದಿ ಕಟ್ಟಡ ಕಾರ್ಮಿಕರು ಸಾವು

ಬೆಳಗಾವಿ ಅಪಘಾತ (Belagavi Accident): ಬೆಳಗಾವಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಏಳು ಮಂದಿ ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇನ್ನೂ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಗೋಕಾಕ ತಾಲೂಕಿನಿಂದ ಗ್ರಾಮಸ್ಥರು ಬೆಳಗಾವಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅವರು ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು.

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, ಏಳು ಮಂದಿ ಕಟ್ಟಡ ಕಾರ್ಮಿಕರು ಸಾವು

Seven Construction Workers Died Road Accident In Belagavi

ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕಟ್ಟಡ ಕಾರ್ಮಿಕರು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲಸದ ನಿಮಿತ್ತ ಬೆಳಗಾವಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ಮೃತರ ಕುಟುಂಬಕ್ಕೆ ಮಾಧ್ಯಮಗಳ ಮೂಲಕ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ (Basavaraja Bommai), ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ ಐದು ಲಕ್ಷ, ಜಿಲ್ಲಾಧಿಕಾರಿ ನಿಧಿಯಿಂದ ಎರಡು ಲಕ್ಷ ಮತ್ತು ಕಾರ್ಮಿಕ ಇಲಾಖೆಯಿಂದ (Labor Department) ಐದು ಲಕ್ಷ ಒಟ್ಟು ತಲಾ ಹನ್ನೆರಡು ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇನ್ನು ಮೃತರನ್ನು ಅಕ್ಕತಂಗಿಯರಹಾಳ್ ಗ್ರಾಮದ ಅಡಿವೆಪ್ಪ ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22) ಮತ್ತು ದಾಸನಹಟ್ಟಿ ಗ್ರಾಮದ ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಮಲ್ಲಾಪುರ ಗ್ರಾಮದ ಬಸವರಾಜ್ ಸನದಿ (40) ಎಂದು ಗುರುತಿಸಲಾಗಿದೆ.

Seven Construction Workers Died Road Accident In Belagavi

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ