ಆಸ್ತಿ ವಿವಾದದಲ್ಲಿ ತಾಯಿಯನ್ನು ಕೊಂದ ಮಗ
ಆಸ್ತಿ ವಿವಾದದಿಂದ ತಾಯಿಯ ಕತ್ತು ಹಿಸುಕಿ ಕೊಲೆಗೈದ ಮಗ ರೈಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮುಂಬೈನ ಉಪನಗರದ ಮುಲುಂಡ್ ನಲ್ಲಿ ಈ ಘಟನೆ ನಡೆದಿದೆ.
ಮುಂಬೈ: ಆಸ್ತಿ ವಿವಾದದಿಂದ ತಾಯಿಯ ಕತ್ತು ಹಿಸುಕಿ ಕೊಲೆಗೈದ ಮಗ ರೈಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮುಂಬೈನ ಉಪನಗರದ ಮುಲುಂಡ್ ನಲ್ಲಿ ಈ ಘಟನೆ ನಡೆದಿದೆ. ವರ್ಧಮಾನ್ ನಗರದ ಹೌಸಿಂಗ್ ಸೊಸೈಟಿಯಲ್ಲಿ ವಾಸವಾಗಿರುವ 21 ವರ್ಷದ ಜಯೇಶ್ ಪಾಂಚಾಲ್ ಆಸ್ತಿ ವಿಚಾರವಾಗಿ ತನ್ನ ತಾಯಿಯೊಂದಿಗೆ ಜಗಳವಾಡಿದ್ದ. ಕೋಪ ತಡೆಯಲಾರದೆ ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಂದಿದ್ದಾನೆ. ನಂತರ ಮುಲುಂಡ್ ರೈಲು ನಿಲ್ದಾಣದಲ್ಲಿ ಲೋಕಲ್ ರೈಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಕೂಡಲೇ ಎಚ್ಚೆತ್ತ ರೈಲ್ವೆ ಪೊಲೀಸರು ಆತನನ್ನು ರಕ್ಷಿಸಿದ್ದಾರೆ.
ಜಯೇಶ್ ಅವರ ಫ್ಲಾಟ್ನ ಹೊರಗೆ ರಕ್ತದ ಕಲೆಗಳನ್ನು ಕಂಡು ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಕೊಲೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಫ್ಲಾಟ್ನ ಬಾಗಿಲು ತೆರೆದು ಒಳ ಪ್ರವೇಶಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಛಾಯಾ ಪಾಂಚಾಲ್ (42) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ ಗುಜರಾತಿ ಭಾಷೆಯಲ್ಲಿ ಬರೆದ ಚೀಟಿ ಹಾಗೂ ಚಾಕು ಪತ್ತೆಯಾಗಿದೆ. ಆಸ್ತಿ ವಿಚಾರದಲ್ಲಿ ಒತ್ತಡ ಹೇರಿ ಕೊಲೆ ಮಾಡಿರುವುದಾಗಿ ಜಯೇಶ್ ಅದರಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
son killed his mother in a property dispute
Follow us On
Google News |