ಟಿಪ್ಪರ್ ಲಾರಿ ಬೈಕ್ ಅಪಘಾತ, ಇಬ್ಬರು ಯುವಕರು ಸಾವು
ಬೈಕ್ ನಲ್ಲಿದ್ದ ಇಬ್ಬರು ಯುವಕರು ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ
ಬಂಟ್ವಾಳ: ಜೂನ್ 14ರ ಮಂಗಳವಾರ ಸಂಜೆ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತರನ್ನು ನಿತಿನ್ ಮತ್ತು ಶಶಿರಾಜ್ ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ವೇಳೆ ಟಿಪ್ಪರ್ ಬಿ.ಸಿ.ರೋಡ್ ಕಡೆಯಿಂದ ಕಾರ್ಕಳ ಕಡೆಗೆ ವೇಗವಾಗಿ ಬರುತ್ತಿತ್ತು. ಸಿದ್ದಕಟ್ಟೆ ತಲುಪಿದಾಗ ಬೈಕ್ಗೆ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಗುರುತಿಸಲಾಗದಷ್ಟು ಜಖಂಗೊಂಡಿದೆ
ಅಪಘಾತ ಮಾಡಿದ ನಂತರ ಲಾರಿ ಚಾಲಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಕೆಲ ಸ್ಥಳೀಯರು ಚೇಸ್ ಮಾಡಿ ಸಿದ್ದಕಟ್ಟೆ ಸಮೀಪದ ಕುದ್ಕೋಳಿ ಬಳಿ ಲಾರಿಯನ್ನು ತಡೆದರು.
ಸಂಚಾರಿ ಪೊಲೀಸ್ ಎಸ್ಐ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Speeding tipper lorry mows down two youngsters to death
Follow us On
Google News |