India News

ಶ್ರೀನಗರದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಹತ್ಯೆ

Srinagar Encounter : ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಖಾನ್ಯಾರ್ ಪ್ರದೇಶದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಹತನಾಗಿದ್ದಾನೆ ಎಂದು ಐಜಿಪಿ ಕಾಶ್ಮೀರ ವಲಯ ವಿದ್ದಿ ಕುಮಾರ್ ಬರ್ದಿ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಲಷ್ಕರ್-ಎ-ತೊಯ್ಬಾ ಕಮಾಂಡರ್ 2023 ರ ಇನ್ಸ್‌ಪೆಕ್ಟರ್ ಮಸ್ರೂರ್ ಹತ್ಯೆ ಪ್ರಕರಣದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಐಜಿಪಿ ಬರ್ದಿ ಹೇಳಿದ್ದಾರೆ. ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

ಲಷ್ಕರ್-ಎ-ತೊಯ್ಬಾ ಕಮಾಂಡರ್ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‌ಕೌಂಟರ್! ಇಬ್ಬರು ಉಗ್ರರ ಹತ್ಯೆ

‘ಈಗ ಕಾರ್ಯಾಚರಣೆ ಮುಗಿದಿದೆ. ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಭಯೋತ್ಪಾದಕನ ಹೆಸರು ಉಸ್ಮಾನ್ ಮತ್ತು ಅವನು ಲಷ್ಕರ್-ಎ-ತೊಯ್ಬಾದ ಕಮಾಂಡರ್. ಆತ ವಿದೇಶಿ ಭಯೋತ್ಪಾದಕ. ಈತನಿಗೆ ಇನ್ಸ್ ಪೆಕ್ಟರ್ ಮಸ್ರೂರ್ ಹತ್ಯೆಯಲ್ಲಿ ನಂಟು ಇದೆ’ ಎಂದು ಐಜಿಪಿ ಬರ್ದಿ ಹೇಳಿದ್ದಾರೆ.

ಅನಂತ್ ನಾಗ್ ಎನ್‌ಕೌಂಟರ್ ಕುರಿತು ಪ್ರತಿಕ್ರಿಯಿಸಿದ ಅವರು.. ‘ಬಂದ ಮಾಹಿತಿಯಂತೆ ನಾವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ’ ಎಂದು ಅವರು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

A Lashkar-e-Taiba commander was killed in an encounter in Srinagar city in Jammu and Kashmir

Our Whatsapp Channel is Live Now 👇

Whatsapp Channel

Related Stories