ಅಖಿಲೇಶ್ ಯಾದವ್ ಬೆಂಗಾವಲು ವಾಹನ ಅಪಘಾತ, ಆರು ಕಾರುಗಳು ಜಖಂ
ಅಖಿಲೇಶ್ ಯಾದವ್ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಕಾರುಗಳು ಒಂದಕ್ಕೊಂದು ಡಿಕ್ಕಿಯಾಗಿ ಆರು ಕಾರುಗಳು ಜಖಂಗೊಂಡಿವೆ.
ಲಕ್ನೋ (Lucknow): ಉತ್ತರ ಪ್ರದೇಶದ (UP) ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರ ಬೆಂಗಾವಲು ವಾಹನ (Convoy Vehicle) ಅಪಘಾತಕ್ಕೀಡಾಗಿದೆ (Accident). ಮತ್ತೊಂದೆಡೆ ಹಲವು ಕಾರುಗಳು ಡಿಕ್ಕಿಯಾಗಿ ಕೆಲವರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶದ ಹರ್ದೋಯ್ (Hardoi) ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಅಖಿಲೇಶ್ ಯಾದವ್ ಹರ್ಪಾಲ್ಪುರದ ಬೈತಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು.
ಅಖಿಲೇಶ್ ಯಾದವ್ ಬೆಂಗಾವಲು ವಾಹನ ಅಪಘಾತ
ಈ ಮಧ್ಯೆ, ಅಖಿಲೇಶ್ ಯಾದವ್ ಅವರ ಬೆಂಗಾವಲು ವಾಹನದ ಚಾಲಕ ಫರ್ಹತ್ ನಗರ ರೈಲ್ವೆ ಕ್ರಾಸಿಂಗ್ ಬಳಿಯ ತಿರುವಿನಲ್ಲಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ಹಿಂದಿನಿಂದ ವೇಗವಾಗಿ ಬಂದ ಕಾರುಗಳು ಡಿಕ್ಕಿ ಹೊಡೆದವು. ಈ ಅಪಘಾತದಲ್ಲಿ ಆರು ಕಾರುಗಳು ಜಖಂಗೊಂಡಿವೆ. ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಆಂಬ್ಯುಲೆನ್ಸ್ನಲ್ಲಿ (Ambulance) ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಲಾಯಿತು.
ಮತ್ತೊಂದೆಡೆ, ಈ ಅಪಘಾತದಲ್ಲಿ ಅಖಿಲೇಶ್ ಯಾದವ್ (Akhilesh Yadav) ಅವರಿಗೆ ಯಾವುದೇ ಹಾನಿಯಾಗಿಲ್ಲ. ಬಳಿಕ ಸುರಕ್ಷಿತವಾಗಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತೆರಳಿದರು. ಏತನ್ಮಧ್ಯೆ, ಈ ಅಪಘಾತಕ್ಕೆ ಸಂಬಂಧಿಸಿದ ವೀಡಿಯೊ (Video) ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗಿವೆ.
Akhilesh Yadav Convoy Meets Accident Several Hurt As Cars Hit Each Other
#AkhileshYadav Convey met with accident in #Hardoi pic.twitter.com/BvbKBIOzDY
— Sonu Kanojia (@NNsonukanojia) February 3, 2023
Follow us On
Google News |