ಪ್ರವಾದಿಯ ಕುರಿತಾದ ಹೇಳಿಕೆ: ಹೌರಾದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ !
ಪ್ರತಿಭಟನಾಕಾರರು ಪೊಲೀಸ್ ವಾಹನಗಳು, ಪೊಲೀಸ್ ಬೂತ್ಗಳು ಮತ್ತು ಸ್ಥಳೀಯ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರು.
ಕೋಲ್ಕತ್ತಾ: ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಶುಕ್ರವಾರ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳದ ಹೌರಾದಲ್ಲಿ ಹಿಂಸಾತ್ಮಕ ಘಟನೆಗಳು ನಡೆದಿವೆ. ಪ್ರತಿಭಟನಾಕಾರರು ಪೊಲೀಸ್ ವಾಹನಗಳು, ಪೊಲೀಸ್ ಬೂತ್ಗಳು ಮತ್ತು ಸ್ಥಳೀಯ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರು.
ಧುಲಾಘರ್, ಪಾಂಕ್ಲಾ ಮತ್ತು ಉಲುಬಾರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಹಿಂತೆಗೆದುಕೊಳ್ಳಲು ಪ್ರಯತ್ನಿಸಿದಾಗ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಹಲವೆಡೆ ರೈಲು ಹಳಿಗಳ ಮೇಲೆ ಪ್ರತಿಭಟನೆಗಳೂ ನಡೆದಿವೆ. ಇದರಿಂದಾಗಿ ಹಲವು ರೈಲುಗಳ ಸಂಚಾರ ರದ್ದುಗೊಂಡಿದ್ದು, ಕೆಲ ರೈಲುಗಳ ಮಾರ್ಗ ಬದಲಿಸಲಾಗಿದೆ.
ಈ ಮಧ್ಯೆ, ಬಿಜೆಪಿ ಕಚೇರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆಯ ವಿಡಿಯೋವನ್ನು ಪಕ್ಷದ ನಾಯಕ ಅನಿರ್ಬನ್ ಗಂಗೂಲಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಮೌನವೇಕೆ ಎಂದು ಪ್ರಶ್ನಿಸಿದರು. ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿದರು. ಮತ್ತೊಂದೆಡೆ, ಬಂಗಾಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸೇನೆಯನ್ನು ನಿಯೋಜಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
Since they listen to her & unfailingly vote for her, West Bengal Chief Minister & Home-Police Minister @MamataOfficial should be able to identify & arrest these rioters/pelters who vandalised & set fire to the BJP office in Howrah rural dist this afternoon. Why is she silent? pic.twitter.com/5WV5TSnrfE
— Dr. Anirban Ganguly (@anirbanganguly) June 10, 2022
Bjp Office In Howrah Set On Fire During Violent Protests Over Comments On Prophet
Follow Us on : Google News | Facebook | Twitter | YouTube