ಒಡಿಶಾ ರೈಲು ಅಪಘಾತ ನಂತರ ಗಾಯಾಳುಗಳಿಗೆ ರಕ್ತದಾನಕ್ಕೆ ಮುಂದಾದ ಸ್ಥಳೀಯ ಜನರು! ಮನಕಲುಕುವಂತಿದೆ ದೃಶ್ಯಗಳು
Odisha train accident : ಇದೀಗ ಬಾಲಸೋರ್ನಲ್ಲಿ ಗಾಯಾಳುಗಳಿಗೆ ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅಪಘಾತದಲ್ಲಿ ಗಾಯಗೊಂಡವರಿಗಾಗಿ ರಕ್ತದಾನ ಮಾಡಲು ದಾಖಲಾದ ಆಸ್ಪತ್ರೆಗಳ ಹೊರಗೆ ಜನರು ಸಾಲುಗಟ್ಟಿ ನಿಂತಿದ್ದಾರೆ.
Odisha train accident : ಇದೀಗ ಬಾಲಸೋರ್ನಲ್ಲಿ ಗಾಯಾಳುಗಳಿಗೆ ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅಪಘಾತದಲ್ಲಿ ಗಾಯಗೊಂಡವರಿಗಾಗಿ ರಕ್ತದಾನ ಮಾಡಲು ದಾಖಲಾದ ಆಸ್ಪತ್ರೆಗಳ ಹೊರಗೆ ಜನರು ಸಾಲುಗಟ್ಟಿ ನಿಂತಿದ್ದಾರೆ.
ಒಡಿಶಾ ರೈಲು ಅಪಘಾತದ ನಂತರ ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದುವರೆಗೆ ಈ ರೈಲು ಅಪಘಾತದಲ್ಲಿ ಸುಮಾರು 280 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ.
ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಅಪಘಾತದ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸಹಾಯ ಮಾಡಿದರು. ಇದೀಗ ಬಾಲಸೋರ್ನಲ್ಲಿ ಗಾಯಾಳುಗಳಿಗೆ ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಮೂರು ರೈಲುಗಳಾದ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ದೊಡ್ಡ ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಪ್ರಯಾಣಿಕರಲ್ಲಿ ಹೆಚ್ಚಿನವರು ತಮ್ಮ ಮೊಬೈಲ್ಗಳನ್ನು ಕಳೆದುಕೊಂಡಿದ್ದಾರೆ ಮತ್ತು ಅವರ ಸ್ಥಿತಿಯ ಬಗ್ಗೆ ತಿಳಿಸಲು ಅವರ ಕುಟುಂಬಗಳಿಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಸ್ಥಳೀಯರು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ.
ಮಕ್ಕಳು ತನ್ನ ಹೆತ್ತವರನ್ನು ಹುಡುಕಾಡುವುದು, ಗಂಡ ಹೆಂಡತಿಯನ್ನು ಹುಡುಕುವುದು, ಹೆಂಡತಿಯನ್ನು ಕಳೆದುಕೊಂಡ ಗಂಡ ಗಂಡನನ್ನು ಕಳೆದುಕೊಂಡ ಹೆಂಡತಿ, ಮಕ್ಕಳನ್ನು ಕಳೆದುಕೊಂಡ ಪೋಷಕರು ಒಂದಕ್ಕಿಂತ ಒಂದು ಭೀಕರ ದೃಶ್ಯಗಳು ಎಂತಹವರ ಮನಕಲುಕುವಂತಿವೆ.
Blood donors queue up after Odisha train accident, local people become heroes for the injured
Follow us On
Google News |