ಕೇರಳದ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ
ಕೇರಳದ (Kerala) ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕಚೇರಿ ಮೇಲೆ ಬಾಂಬ್ ದಾಳಿ (Bomb Hurled) ನಡೆದಿದೆ.
ತಿರುವನಂತಪುರಂ: ಕೇರಳದ (Kerala) ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕಚೇರಿ ಮೇಲೆ ಬಾಂಬ್ ದಾಳಿ (Bomb Hurled) ನಡೆದಿದೆ. ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಕಚೇರಿಯೊಂದರ ಮೇಲೆ ಮಂಗಳವಾರ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದು, ಕಟ್ಟಡದ ಕಿಟಕಿಗಳಿಗೆ ಹಾನಿಯಾಗಿದೆ. ಆದರೆ, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ದಾಳಿಯ ಹಿಂದಿನ ಕಾರಣಗಳು ತಿಳಿದುಬಂದಿಲ್ಲ. ಸದ್ಯ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದು, ಇದರ ಭಾಗವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಆದರೆ, ಆರ್ಎಸ್ಎಸ್ ಸಿಪಿಐ (ಎಂ) ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿದೆ. ಕಳೆದ ತಿಂಗಳು 30ರಂದು ರಾತ್ರಿ ಸಿಪಿಐ(ಎಂ) ರಾಜ್ಯ ಕೇಂದ್ರ ಕಚೇರಿಯ ಎಕೆಜಿ ಸೆಂಟರ್ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು.
ರಾತ್ರಿ 11:30ಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಸಿಪಿಎಂ ಕೇಂದ್ರ ಕಚೇರಿಯ ಗೇಟ್ ಮೇಲೆ ಬಾಂಬ್ ಎಸೆದು ಪರಾರಿಯಾಗಿದ್ದಾನೆ. ಈ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಳಿಕ ಕೇರಳದಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಇದುವರೆಗೂ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗಿಲ್ಲ. ಮೊನ್ನೆಯಷ್ಟೇ ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಕಚೇರಿ ಮೇಲೆ ದಾಳಿ ನಡೆದಿತ್ತು.
bomb hurled at rss office in kerala kannur district
Kerala | Bomb hurled at RSS office in Payyannur, Kannur district. The incident happened early this morning with window glasses of the building broken in the attack, as per Payyannur police
— ANI (@ANI) July 12, 2022
Follow us On
Google News |
Advertisement