Kanpur Violence, ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಿಂಸಾಚಾರ.. 36 ಜನರ ಬಂಧನ
Kanpur Violence: ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಹಿಂಸಾಚಾರ ಭುಗಿಲೆದ್ದಿದೆ. ಶುಕ್ರವಾರದ ಪ್ರಾರ್ಥನೆ ಮುಗಿದ ಕೂಡಲೇ ಎರಡು ಗುಂಪುಗಳು ಮಸೀದಿ ಬಳಿ ಕಲ್ಲು ತೂರಾಟ ನಡೆಸಿವೆ.
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಹಿಂಸಾಚಾರ ಭುಗಿಲೆದ್ದಿದೆ (Kanpur Violence). ಶುಕ್ರವಾರದ ಪ್ರಾರ್ಥನೆ ಮುಗಿದ ಕೂಡಲೇ ಎರಡು ಗುಂಪುಗಳು ಮಸೀದಿ ಬಳಿ ಕಲ್ಲು ತೂರಾಟ ನಡೆಸಿವೆ. ಇದರಿಂದ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರವಾದಿ ಮೊಹಮ್ಮದ್ ಕುರಿತು ಇತ್ತೀಚೆಗೆ ನಡೆದ ಟಿವಿ ಚರ್ಚೆಯಲ್ಲಿ ಬಿಜೆಪಿ ವಕ್ತಾರರು ಅನುಚಿತ ಹೇಳಿಕೆ ನೀಡಿದ್ದಾರೆ ಎಂಬ ಆರೋಪಗಳಿವೆ. ಟೀಕೆಗಳನ್ನು ಖಂಡಿಸಿ ಶುಕ್ರವಾರ ಕಾನ್ಪುರದಲ್ಲಿ ಬಂದ್ ಆಚರಿಸಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ವೇಳೆ ಎರಡು ಬಣಗಳ ನಡುವೆ ಘರ್ಷಣೆ ನಡೆದಿದೆ.
ಕಲ್ಲು ತೂರಾಟದ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋಗಳನ್ನು ಆಧರಿಸಿ ಪೊಲೀಸರು 36 ಮಂದಿಯನ್ನು ಬಂಧಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇನ್ನಷ್ಟು ಜನರನ್ನು ಗುರುತಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮೀನಾ ತಿಳಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಸಂಚುಕೋರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಹಿಂಸಾಚಾರ ಎಸಗಿದವರ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುವುದು ಎನ್ನಲಾಗಿದೆ.
Clashes In Kanpur Over Insult To Prophet During Tv Debate 36 Arrested
Follow us On
Google News |