ವಿಮಾನದಲ್ಲಿ ಮದ್ಯ ಸೇವಿಸಿ ಅವಾಂತರ, ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ
ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮದ್ಯ ಸೇವಿಸಿ ಅವಾಂತರ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಮುಂಬೈ: ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮದ್ಯ ಸೇವಿಸಿ ಅವಾಂತರ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ದೋಹಾ-ಬೆಂಗಳೂರು ವಿಮಾನದಲ್ಲಿದ್ದ ಕೇರಳದ ಪ್ರಯಾಣಿಕ ಸರ್ಫುದ್ದೀನ್ ಉಲ್ವಾರ್ ಪಾನಮತ್ತನಾಗಿದ್ದ. ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.
ಈ ವೇಳೆ ಸಹ ಪ್ರಯಾಣಿಕರೊಂದಿಗೆ ವಾಗ್ವಾದಕ್ಕಿಳಿದರು. ವಿಮಾನದಲ್ಲಿದ್ದ ಉಳಿದ ಪ್ರಯಾಣಿಕರು ಗಾಬರಿಗೊಂಡರು. ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಭೂಸ್ಪರ್ಶ ಮಾಡಲಾಯಿತು.
ಬಳಿಕ ವಿಮಾನದಲ್ಲಿ ಗಲಾಟೆ ಸೃಷ್ಟಿಸಿದ ಸರ್ಫುದ್ದೀನ್ ಉಲ್ವಾರ್ ನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಒಪ್ಪಿಸಲಾಗಿದೆ.
ಉಲ್ವಾರ್ ವಿರುದ್ಧ ವಿಮಾನಯಾನ ಕಾನೂನಿನ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಸರ್ಫುದ್ದೀನ್ ಉಲ್ವಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Drunk Flier Forces Bengaluru Bound Flights Emergency Landing In Mumbai
Follow Us on : Google News | Facebook | Twitter | YouTube