ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಸಾವು
ಮುಂಬೈನ ಖಾಸಗಿ ಕಟ್ಟಡದ ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ದುರ್ಘಟನೆ. ಮತ್ತೊಬ್ಬ ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿದ ನಾಲ್ವರು ಕಾರ್ಮಿಕರ ಸಾವು
- ಮುಂಬೈನ ನಾಗ್ಪಾಡಾ ಪ್ರದೇಶದಲ್ಲಿ ಭಾನುವಾರದ ಮಧ್ಯಾಹ್ನ ಘಟನೆ
- ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
Mumbai: ಮುಂಬೈನ ನಾಗ್ಪಾಡಾ ಪ್ರದೇಶದಲ್ಲಿ ಭಾನುವಾರದ ಮಧ್ಯಾಹ್ನ ನಡೆದ ದುರಂತ ಘಟನೆ. ನಿರ್ಮಾಣ ಹಂತದಲ್ಲಿದ್ದ ಖಾಸಗಿ (Private) ಕಟ್ಟಡದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ (Water Tank Cleaning) ವೇಳೆ ಆಕಸ್ಮಿಕವಾಗಿ ಉಸಿರುಗಟ್ಟಿದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ! ಮನಸ್ಸಿಗೆ ಘಾಸಿಗೊಳಿಸುವ ಸುದ್ದಿ
ಮಧ್ಯಾಹ್ನ 12:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಟ್ಯಾಂಕಿನ ಒಳಗಡೆ ಪ್ರವೇಶಿಸಿದ ಕಾರ್ಮಿಕರು ಆಮ್ಲಜನಕದ ಕೊರತೆಯಿಂದ (Oxygen Deficiency) ತೀವ್ರವಾಗಿ ಅಸ್ವಸ್ಥರಾಗಿದ್ದಾರೆ.
ಕೆಲ ನಿಮಿಷಗಳಲ್ಲಿಯೇ ಅವರ ಸ್ಥಿತಿ ಗಂಭೀರವಾಗಿ ಮಾರ್ಪಟ್ಟಿದೆ. ವಿಷಯ ತಿಳಿದ ಕೂಡಲೇ ಅಗ್ನಿ ಶಾಮಕ ದಳ, ಪೊಲೀಸರು ಹಾಗೂ ಬೃಹನ್ ಮುಂಬೈ ಮಹಾನಗರ ಪಾಲಿಕೆಯ (BMC) ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕಾರ್ಮಿಕರನ್ನು ಟ್ಯಾಂಕಿನಿಂದ ಹೊರತೆಗೆಯುವ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ: ಕಾಣೆಯಾಗಿದ್ದ 15 ವರ್ಷದ ಬಾಲಕಿ ನೆರೆಮನೆಯ ವ್ಯಕ್ತಿಯೊಂದಿಗೆ ಶವವಾಗಿ ಪತ್ತೆ
ಉಸಿರುಗಟ್ಟಿದ ಐವರು ಕಾರ್ಮಿಕರನ್ನು ತಕ್ಷಣವೇ JJ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ವೈದ್ಯರು ನಾಲ್ವರು ಈಗಾಗಲೇ ಮೃತರಾಗಿರುವುದನ್ನು ದೃಢಪಡಿಸಿದರು. ಇನ್ನೊಬ್ಬ ಕಾರ್ಮಿಕನಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಕಟ್ಟಡದ ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳ ಲೋಪದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
Four Labourers Die While Cleaning Water Tank in Mumbai
Our Whatsapp Channel is Live Now 👇