Heavy Rain: ಭಾರೀ ಮಳೆಗೆ ಅಮರನಾಥದಲ್ಲಿ ಪ್ರವಾಹ.. ಐವರು ಸಾವು
Heavy Rain In Amarnath Five People Died In Floods: ಅಮರನಾಥ ಯಾತ್ರಾರ್ಥಿಗಳ ಮೇಲೆ ಪ್ರಕೃತಿ ವಿಕೋಪ, ಭಾರೀ ಮಳೆಯಿಂದ ಅಮರನಾಥ ಜಲಾವೃತವಾಗಿದೆ, ದೇವರ ದರ್ಶನಕ್ಕೆ ತೆರಳಿದ್ದವರು ಪರದಾಡುವಂತಾಗಿದೆ. ಟೆಂಟ್ಗಳಲ್ಲಿ ವಾಸಿಸುತ್ತಿದ್ದವರನ್ನು ಪ್ರವಾಹವು ಮುಳುಗಿಸಿತು. ಪ್ರವಾಹದಲ್ಲಿ ಐವರು ಸಾವನ್ನಪ್ಪಿದ್ದಾರೆ..
ಜಮ್ಮು ಮತ್ತು ಕಾಶ್ಮೀರದ ಅಮರನಾಥದ ಪವಿತ್ರ ಗುಹೆಯ ದೇಗುಲದ ಬಳಿ ಮೇಘಸ್ಫೋಟ ಸಂಭವಿಸಿದ್ದು, ಈ ವೇಳೆ ದಿಢೀರ್ ಉಂಟಾದ ಪ್ರವಾಹಕ್ಕೆ ಸಿಲುಕಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಹೆಯ ಬಳಿ ಜೋರಾಗಿ ಮಳೆ ಸುರಿಯುತ್ತಿದೆ. ಇದ್ದಕ್ಕಿದ್ದಂತೆ ಪ್ರವಾಹ ಸೃಷ್ಟಿಯಾಗಿದೆ. ಡೇರೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಪ್ರವಾಹದಲ್ಲಿ ಐವರು ಸಾವನ್ನಪ್ಪಿದ್ದಾರೆ. ಎನ್ಡಿಆರ್ಎಫ್ ತಂಡಗಳಿಂದ ಪರಿಹಾರ ಕಾರ್ಯಗಳು ನಡೆಯುತ್ತಿವೆ.
ವಾಹನಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಪ್ರವಾಹದ ಸಮಯದಲ್ಲಿ ಸುಮಾರು 12 ಸಾವಿರ ಜನರು ಅಲ್ಲಿದ್ದರು. ಸಂಜೆ 5.30ರಿಂದ ಧಾರಾಕಾರ ಮಳೆ ಸುರಿಯುತ್ತಿದೆ.
ಹಲವು ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾತ್ರಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಮರನಾಥ ಯಾತ್ರೆ ಜೂನ್ 30 ರಂದು ಪ್ರಾರಂಭವಾಯಿತು.
#WATCH | J&K: Massive amount of water flowing turbulently after a cloud burst occurred in the lower reaches of Amarnath cave. Rescue operation is underway at the site pic.twitter.com/w97pPU0c6k
— ANI (@ANI) July 8, 2022