ರಾಯಪುರ: ಭಾರತ್ ಜೋಡೋ ಯಾತ್ರೆಯಲ್ಲಿ ರೈತರ ನೋವನ್ನು ನಾನು ಅನುಭವಿಸಿದೆ; ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆಯಲ್ಲಿ ರೈತರ ನೋವನ್ನು ಅನುಭವಿಸಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Bengaluru, Karnataka, India
Edited By: Satish Raj Goravigere

ಭಾರತ್ ಜೋಡೋ ಯಾತ್ರೆಯಲ್ಲಿ ರೈತರ ನೋವನ್ನು ಅನುಭವಿಸಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ 85ನೇ ಸಮಾವೇಶ ಕಳೆದ ಶುಕ್ರವಾರ ಛತ್ತೀಸ್‌ಗಢದ ನವರಾಯಪುರದಲ್ಲಿ ಆರಂಭವಾಗಿದೆ. 3 ದಿನಗಳ ಈ ಸಮಾವೇಶದಲ್ಲಿ ಮುಂಬರುವ ಸಂಸತ್ ಚುನಾವಣೆ, ಮೈತ್ರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

I learned a lot during Bharat Jodo Yatra Says Rahul Gandhi in 85th convention of the Congress party

ಈ ವೇಳೆ ಕಾಂಗ್ರೆಸ್ ಸಮಾವೇಶದ ಕೊನೆಯ ದಿನವಾದ ಇಂದು ರಾಹುಲ್ ಗಾಂಧಿ ಮಾತನಾಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ,

ಭಾರತ್ ಜೋಡೋ ಯಾತ್ರೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ. ನಾನು ನನ್ನ ದೇಶಕ್ಕಾಗಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ ಮಾಡಿದ್ದೇನೆ.

ಯಾತ್ರೆಯಲ್ಲಿ ಸಾವಿರಾರು ಮಂದಿ ನನ್ನ ಹಾಗೂ ಪಕ್ಷಕ್ಕೆ ಸೇರ್ಪಡೆಗೊಂಡರು. ಭಾರತ್ ಜೋಡೋ ಯಾತ್ರೆಯಲ್ಲಿ ರೈತರ ಎಲ್ಲಾ ಸಮಸ್ಯೆಗಳನ್ನು ಆಲಿಸಿದ್ದೇನೆ… ಅವರ ನೋವನ್ನು ನಾನು ಅನುಭವಿಸಿದ್ದೇನೆ,’ ಎಂದರು.

I learned a lot during Bharat Jodo Yatra Says Rahul Gandhi in 85th convention of the Congress party