ರಾಜಸ್ಥಾನ ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿದ ಮಹಿಳೆ ಮೇಲೆ ದೆಹಲಿಯಲ್ಲಿ ಶಾಯಿ ದಾಳಿ
ಸಚಿವರ ಪುತ್ರನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದ ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಶಾಯಿ ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ.
ನವದೆಹಲಿ: ಸಚಿವರ ಪುತ್ರನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದ ಮಹಿಳೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಶಾಯಿ ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ.
ದೆಹಲಿಯ 23 ವರ್ಷದ ಮಹಿಳೆಯೊಬ್ಬರು ರಾಜಸ್ಥಾನದ ಸಚಿವ ಮಹೇಶ್ ಜೋಶಿ ಅವರ ಪುತ್ರ ರೋಹಿತ್ ಜೋಷಿ ಪದೇ ಪದೇ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಒಂದು ವರ್ಷದ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಈತ, ಮದುವೆ ಹೆಸರಲ್ಲಿ ತನ್ನನ್ನು ಬಳಸಿಕೊಂಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದರು.
ದೆಹಲಿ ಪೊಲೀಸರು ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರೋಹಿತ್ ನನ್ನು ಬಂಧಿಸಲು ಕಳೆದ ತಿಂಗಳು ರಾಜಸ್ಥಾನಕ್ಕೆ ಹೋಗಿದ್ದರು. ಆದರೆ ಅವರು ಅಲ್ಲಿಲ್ಲದ ಕಾರಣ ಹಿಂತಿರುಗಿದರು. ಏತನ್ಮಧ್ಯೆ, ದೆಹಲಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದ ರೋಹಿತ್ ಜೋಶಿ ಶನಿವಾರ ದೆಹಲಿ ಪೊಲೀಸರ ಮುಂದೆ ಶರಣಾಗಿದ್ದಾರೆ.
ಏತನ್ಮಧ್ಯೆ, ಶನಿವಾರದಂದು ದಕ್ಷಿಣ ದೆಹಲಿಯ ಕಾಳಿಂದಿ ಕುಂಜ್ ರಸ್ತೆಯಲ್ಲಿ ತನ್ನ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಶಾಯಿ ದಾಳಿ ನಡೆಸಿದ್ದಾರೆ. ಆಕೆಯ ದೇಹ ಮತ್ತು ಬಟ್ಟೆಗೆ ಶಾಯಿ ಎರಚಿ ಪರಾರಿಯಾಗಿದ್ದಾರೆ.
ನಂತರ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಆಕೆಯನ್ನು ಏಮ್ಸ್ಗೆ ಕರೆದೊಯ್ಯಲಾಯಿತು. ಆಕೆಯ ಮೇಲೆ ಎರಚಿದ ನೀಲಿ ದ್ರವವು ಶಾಯಿ ಎಂದು ಹೇಳಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.
Ink Attack In Delhi On Woman Who Accused Rajasthan Ministers Son Of Rape
Follow us On
Google News |