ರೈತರ ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ: ಇಬ್ಬರು ಸಾವು
ಪಂಜಾಬ್ನ ಇಬ್ಬರು ರೈತರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ವರ್ಷಪೂರ್ತಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಳ್ಳುತ್ತಿದ್ದಂತೆ ರೈತರು ತಮ್ಮ ಮನೆಗಳಿಗೆ ಮರಳುತ್ತಿರುವಾಗ ಈ ಅವಘಡ ನಡೆದಿದೆ.
ಚಂಡೀಗಢ: ಪಂಜಾಬ್ನ ಇಬ್ಬರು ರೈತರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ವರ್ಷಪೂರ್ತಿ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಳ್ಳುತ್ತಿದ್ದಂತೆ ರೈತರು ತಮ್ಮ ಮನೆಗಳಿಗೆ ಮರಳುತ್ತಿರುವಾಗ ಈ ಅವಘಡ ನಡೆದಿದೆ. ಪಂಜಾಬ್ನ ಕೆಲವು ರೈತರು ದೆಹಲಿಯ ಟಿಕ್ರಿ ಪ್ರತಿಭಟನಾ ಪ್ರದೇಶದಿಂದ ಟ್ರ್ಯಾಕ್ಟರ್ ಟೈಲರ್ನಲ್ಲಿ ತಮ್ಮ ರಾಜ್ಯಕ್ಕೆ ಮರಳಿದರು.
ಆದರೆ, ಹರಿಯಾಣದ ಹಿಸಾರ್ಗೆ ತೆರಳುತ್ತಿದ್ದಾಗ ಲಾರಿಯೊಂದು ಅವರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿ ಗಡಿಯಲ್ಲಿರುವ ಪ್ರತಿಭಟನಾ ಪ್ರದೇಶಗಳಿಂದ ಟ್ರ್ಯಾಕ್ಟರ್ ಮತ್ತು ಇತರ ವಾಹನಗಳಲ್ಲಿ ತಮ್ಮ ಮನೆಗಳಿಗೆ ಮರಳಿದರು. ಇದರಿಂದ ಸಿಂಘು ಪ್ರದೇಶ ಹಾಗೂ ಇತರೆಡೆ ಸಂಚಾರ ಮಂದಗತಿಯಲ್ಲಿ ಸಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು… ಪ್ರತಿಭಟನೆ ಅಂತ್ಯಗೊಳಿಸಿದ ರೈತರು ಮನೆಗೆ ತೆರಳಿದರು.
Follow Us on : Google News | Facebook | Twitter | YouTube