‘ಶಿವಲಿಂಗ’ ಪ್ರದೇಶಕ್ಕೆ ಭದ್ರತೆ
ಜ್ಞಾನವಾಪಿ ಸಂಕೀರ್ಣದಲ್ಲಿ ಶಿವಲಿಂಗವನ್ನು ಗುರುತಿಸಲಾಗಿದೆ ಎನ್ನಲಾದ ಪ್ರದೇಶಕ್ಕೆ ಭದ್ರತೆ ಒದಗಿಸುವಂತೆ ವಾರಣಾಸಿ ಜಿಲ್ಲಾಧಿಕಾರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.
Delhi, India (ನವದೆಹಲಿ): ಜ್ಞಾನವಾಪಿ ಸಂಕೀರ್ಣದಲ್ಲಿ (Gyanvapi Mosque) ಶಿವಲಿಂಗವನ್ನು (Shivalinga) ಗುರುತಿಸಲಾಗಿದೆ ಎನ್ನಲಾದ ಪ್ರದೇಶಕ್ಕೆ ಭದ್ರತೆ ಒದಗಿಸುವಂತೆ ವಾರಣಾಸಿ ಜಿಲ್ಲಾಧಿಕಾರಿಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ ಮುಸ್ಲಿಮರಿಗೆ ನಮಾಜ್ ಮಾಡಲು ಯಾವುದೇ ಅಡೆತಡೆಗಳಿಲ್ಲ ಎಂದು ಸೂಚಿಸಿದೆ. ಆದರೆ, ಜ್ಞಾನವಾಪಿ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕೆಂಬ ಮಸೀದಿ ಸಮಿತಿಯ ಮನವಿಯನ್ನು ಸ್ಥಳೀಯ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದೆ.
ಹಿಂದೂ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಏತನ್ಮಧ್ಯೆ, ವಾರಣಾಸಿ ನ್ಯಾಯಾಲಯವು ಜ್ಞಾನವಾಪಿ ಸರ್ವೆ ಅಡ್ವೊಕೇಟ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸಿದೆ. ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಅವರನ್ನು ಸಮಿತಿಯಿಂದ ಹೊರಹಾಕಲಾಯಿತು. ಸಮೀಕ್ಷೆ ಕುರಿತು ವರದಿ ನೀಡಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶ ನೀಡಿದೆ.
Muslim’s Can Offer Prayers At Gyanvapi Mosque Says Sc
Follow us On
Google News |