ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ.. 9 ಮಂದಿ ಸಜೀವ ದಹನ
ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಎರಡು ಟ್ರಕ್ಗಳು ಡಿಕ್ಕಿ ಹೊಡೆದು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ
Mumbai, India (ಮುಂಬೈ) ಮಹಾರಾಷ್ಟ್ರದ (Maharashtra) ಚಂದ್ರಾಪುರ (Chandrapur) ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಅಪಘಾತದಲ್ಲಿ ಒಂಬತ್ತು ಮಂದಿ ಸಜೀವ ದಹನವಾಗಿದ್ದದ್ದಾರೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಚಂದ್ರಾಪುರ-ಮುಲ್ ರಸ್ತೆಯ ಅಜಯಪುರ ಬಳಿ ಡೀಸೆಲ್ ಟ್ಯಾಂಕರ್ ಹಾಗೂ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದಿದೆ. ಬೆಂಕಿ ಅವಘಡದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತರಲ್ಲಿ ಲಾರಿ ಚಾಲಕ ಮತ್ತು ಕಾರ್ಮಿಕರು ಸೇರಿದ್ದಾರೆ ಎಂದು ಚಂದ್ರಾಪುರ ಎಸ್ಡಿಪಿವೋ ಸುಧೀರ್ ನಂದನವರ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅಪಘಾತ ಸಂಭವಿಸಿದ ಒಂದು ಗಂಟೆಯ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಗಂಟೆಗಳ ಪರಿಶ್ರಮದ ನಂತರ ಬೆಂಕಿಯನ್ನು ನಿಯಂತ್ರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹಗಳನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
Nine Died After Two Trucks Collided In Maharashtra’s Chandrapur
English Summary
CHANDRAPUR (ಚಂದ್ರಾಪುರ್): As many as nine people were burnt alive (ಒಂಬತ್ತು ಮಂದಿ ಸಜೀವ ದಹನ) after a fire broke out following a collision between a tanker and a truck (ಟ್ಯಾಂಕರ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ) on the outskirts of Chandrapur in Maharashtra (ಮಹಾರಾಷ್ಟ್ರದ ಚಂದ್ರಾಪುರ್ ಹೊರವಲಯ), a police official said on Friday (ಪೊಲೀಸ್ ಮೂಲಗಳ ಮಾಹಿತಿ).
Follow us On
Google News |