ಇಡೀ ನ್ಯಾಯಾಧಿಕರಣವೇ ನೀರುಪಾಲಾಯಿತು: ಸುಪ್ರೀಂ
ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನವದೆಹಲಿ: ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ‘ಇಡೀ ನ್ಯಾಯಾಧಿಕರಣವೇ ನೀರುಪಾಲಾಗಿದೆ’ ಎಂದು ಕೇಂದ್ರಕ್ಕೆ ಛೀಮಾರಿ ಹಾಕಿದೆ.
ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿದ್ದರೆ ನ್ಯಾಯಮಂಡಳಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಪ್ರಶ್ನಿಸಿದೆ.
ಸಿಎಟಿಯಲ್ಲಿ ಒಟ್ಟು ನ್ಯಾಯಾಧೀಶರು/ನಿರ್ವಾಹಕರ ಸಂಖ್ಯೆ 69. ಪ್ರಸ್ತುತ 29 ಮಂದಿ ಇದ್ದಾರೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ನಿರ್ದೇಶನಗಳನ್ನು ನೀಡಿದೆ. ಪ್ರಸ್ತುತ ನ್ಯಾಯಮಂಡಳಿಯಲ್ಲಿರುವವರನ್ನು ಅವರ ಅಧಿಕಾರಾವಧಿ ಮುಗಿದ ನಂತರವೂ ಉಳಿಸಿಕೊಳ್ಳಬೇಕು ಎಂದು ಅವರು ಕೇಂದ್ರಕ್ಕೆ ತಿಳಿಸಿದರು. ಮುಂದಿನ ವಿಚಾರಣೆಯವರೆಗೂ ಇದಕ್ಕೆ ಬದ್ಧವಾಗಿರುವಂತೆ ಹೇಳಿದೆ.
Sc Takes A Dig At Centre Over Central Administrative Tribunal Performance
Follow Us on : Google News | Facebook | Twitter | YouTube