ಕೇಂದ್ರದ ಧೋರಣೆಯಿಂದಾಗಿ ಕಾಶ್ಮೀರಿ ಪಂಡಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ; ಮೆಹಬೂಬಾ ಮುಫ್ತಿ
ಕೇಂದ್ರದ ವರ್ತನೆಯಿಂದ ಕಾಶ್ಮೀರಿ ಪಂಡಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.
ಶ್ರೀನಗರ: ಕೇಂದ್ರದ ವರ್ತನೆಯಿಂದ ಕಾಶ್ಮೀರಿ ಪಂಡಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ಇತ್ತೀಚೆಗೆ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್, ಕುಟುಂಬವನ್ನು ಭೇಟಿಯಾಗಲು ಅನುವು ಮಾಡಿಕೊಡದೆ ತನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ರಶ್ಮಿಕಾ ಮಂದಣ್ಣ ಇನ್ಮುಂದೆ ಕನ್ನಡ ಸಿನಿಮಾ ಮಾಡೋಲ್ವಂತೆ
ಮನೆಯ ಮುಂದೆ ನಿಲ್ಲಿಸಿರುವ ಸಿಆರ್ಪಿಎಫ್ ವಾಹನಗಳು ಹಾಗೂ ಗೇಟಿಗೆ ಹಾಕಿರುವ ಬೀಗದದ ಫೋಟೋಗಳನ್ನು ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಕೇಂದ್ರ ಸರಕಾರ ಕಾಶ್ಮೀರಿ ಪಂಡಿತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ, ತಪ್ಪು ನೀತಿಗಳಿಂದ ಪಂಡಿತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಛೋಟಿಗಾಮ್ನಲ್ಲಿರುವ ಭಟ್ ಅವರ ಕುಟುಂಬವನ್ನು ಭೇಟಿ ಮಾಡುವ ಪ್ರಯತ್ನವನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ ಎಂದು ಅವರು ಟೀಕಿಸಿದರು. ಸುರಕ್ಷತೆಗಾಗಿ ಅವರನ್ನು ಬಂಧನದಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
mehbooba mufti under house arrest
Follow us On
Google News |
Advertisement