ಮುಖ್ತಾರ್ ಅಬ್ಬಾಸ್ ನಖ್ವಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ್ದಾರೆ.
ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ್ದಾರೆ. ನಖ್ವಿ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಸೇವೆಯನ್ನು ಮೋದಿ ಶ್ಲಾಘಿಸಿದರು. ನಖ್ವಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿದ್ದರು. ನಖ್ವಿ ಉತ್ತರ ಪ್ರದೇಶವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ. ನಾಳೆ ಅವರ ರಾಜ್ಯಸಭಾ ಅಧಿಕಾರಾವಧಿಯೂ ಕೊನೆಗೊಳ್ಳಲಿದೆ.
ಪ್ರಧಾನಿ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಮುಂದುವರಿದಿರುವ ರಾಜನಾಥ್ ಸಿಂಗ್, ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಸಂಪುಟ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅವರಲ್ಲಿ ಒಬ್ಬರು ಇಂದು ರಾಜೀನಾಮೆ ನೀಡಿದ್ದಾರೆ. ರಾಜನಾಥ್ ಸಿಂಗ್ ಮಾತ್ರ ಉಳಿದಿದ್ದಾರೆ.
ಆದರೆ ನಖ್ವಿ ಉಪರಾಷ್ಟ್ರಪತಿ ರೇಸ್ನಲ್ಲಿದ್ದಾರೆ ಎಂಬ ಊಹಾಪೋಹಗಳಿವೆ. ನಖ್ವಿ ಅವರನ್ನು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆಯಂತೆ. ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಪಿ ನಡ್ಡಾ ಮತ್ತು ನಖ್ವಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ನಂತರ ಅವರು ರಾಜೀನಾಮೆ ನೀಡಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಪ್ರಸ್ತುತ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ.
mukhtar-abbas-naqvi-resigns-his-union-minister-post
Follow us On
Google News |