India News

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ, ರಾಯ್‌ಪುರದಲ್ಲಿ ತುರ್ತು ಭೂಸ್ಪರ್ಶ

ವಿಮಾನಗಳು ನಕಲಿ ಬಾಂಬ್ ಬೆದರಿಕೆಗಳನ್ನು ಎದುರಿಸುತ್ತಲೇ ಇವೆ. ಕಳೆದ ತಿಂಗಳಿಂದ ದೇಶದ ಹಲವು ವಿಮಾನಯಾನ ಸಂಸ್ಥೆಗಳಿಗೆ ಇದೆ ರೀತಿಯ ಬಾಂಬ್ ಬೆದರಿಕೆಗಳು ಬಂದಿವೆ. ಈ ನಡುವೆ ನಾಗ್ಪುರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo Flight) ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಲಾಗಿದೆ.

187 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತಿದ್ದ ವಿಮಾನವು ಬಾಂಬ್ ಬೆದರಿಕೆಯ ನಂತರ 9 ಗಂಟೆಯ ನಂತರ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಇಳಿಯಿತು ಎಂದು ರಾಯ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ಸಂತೋಷ್ ಸಿಂಗ್ ಹೇಳಿದ್ದಾರೆ.

indigo Flight

ಪ್ರಾಥಮಿಕ ಮಾಹಿತಿ ಪ್ರಕಾರ ವಿಮಾನದಲ್ಲಿ ಬಾಂಬ್ ಇರುವುದಾಗಿ ಪ್ರಯಾಣಿಕರೊಬ್ಬರು ಸಿಬ್ಬಂದಿಗೆ ತಿಳಿಸಿದ್ದಾರೆ. ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಈ ಮಾಹಿತಿ ನೀಡಿದ ನಂತರ ವಿಮಾನವನ್ನು ರಾಯ್‌ಪುರಕ್ಕೆ ತಿರುಗಿಸಲಾಯಿತು. ಇಳಿದ ತಕ್ಷಣ ಭದ್ರತಾ ತಪಾಸಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಸ್ಕ್ವಾಡ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕರನ್ನು ಇಳಿಸಿ ವಿಮಾನ ಮತ್ತು ಪ್ರಯಾಣಿಕರ ಲಗೇಜ್‌ಗಳನ್ನು ಕ್ಷಣಮಾತ್ರದಲ್ಲಿ ಪರಿಶೀಲಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ಕೋಲ್ಕತ್ತಾದಿಂದ ಬಿಲಾಸ್‌ಪುರಕ್ಕೆ (ಛತ್ತೀಸ್‌ಗಢ) ಅಲಯನ್ಸ್ ಏರ್ ವಿಮಾನಕ್ಕೆ ಇದೇ ರೀತಿಯ ಬೆದರಿಕೆ ಬಂದಿತ್ತು, ನಂತರ ವಿಮಾನವನ್ನು ಬಿಲಾಸ್‌ಪುರ ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಯಿತು ಆದರೆ ಅನುಮಾನಾಸ್ಪದ ವಸ್ತು ಏನೂ ಕಂಡುಬಂದಿಲ್ಲ.

Nagpur Kolkata Indigo Flight Lands In Raipur After Hoax Bomb Threat

Our Whatsapp Channel is Live Now 👇

Whatsapp Channel

Related Stories