Naba Kishore Das; ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಮೇಲೆ ಗುಂಡಿನ ದಾಳಿ

ನವದೆಹಲಿ / ಬ್ರಜರಾಜನಗರ: ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ (Odisha Health Minister Naba Das) ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಗುಂಡು (Shutout) ಹಾರಿಸಿದ್ದಾರೆ. ನಬಾ ಕಿಶೋರ್ ದಾಸ್ ಅವರು ಜಾರ್ಸುಗುಡಾ ಶಾಸಕರೂ ಆಗಿದ್ದಾರೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಬಾ ದಾಸ್ ಅವರು ಬ್ರಜರಾಜನಗರದ (Brajarajnagar) ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ನಬಾ ಕಿಶೋರ್ ದಾಸ್ ಮೇಲೆ ಗುಂಡು ಹಾರಿಸಿದ ಅಪರಿಚಿತ ವ್ಯಕ್ತಿ

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇಲ್ಲಿ ಕೆಲವು ಅಪರಿಚಿತ ದುಷ್ಕರ್ಮಿಗಳು ಬ್ರಜರಾಜನಗರದ ಗಾಂಧಿ ಚೌಕ್‌ನಲ್ಲಿ ಅವರ ಎದೆಗೆ ಗುಂಡು ಹಾರಿಸಿದ್ದಾರೆ. ತರಾತುರಿಯಲ್ಲಿ, ದಾಸ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಪ್ರಸ್ತುತ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಮೇಲೆ ದಾಳಿ – ಪೊಲೀಸರ ಸಮವಸ್ತ್ರದಲ್ಲಿ ಕೃತ್ಯ

ದಾಳಿಕೋರರು ಪೊಲೀಸ್ ಸಮವಸ್ತ್ರದಲ್ಲಿ ಬಂದಿದ್ದರು ಎಂಬ ಮಾಹಿತಿಯೂ ಇದೆ. ಆದ್ದರಿಂದಲೇ ಯಾರೂ ಅವನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಮೇಲೆ ಬ್ರಜ್‌ರಾಜ್ ನಗರದಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಸುತ್ತಮುತ್ತ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ. ಅಲ್ಲಿ ಪ್ರದೇಶವನ್ನು ಸೀಲ್ ಮಾಡಲಾಗುತ್ತಿದೆ. ಅದೇ ವೇಳೆ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ನಬಾ ಕಿಶೋರ್ ದಾಸ್ ಅವರ ಸ್ಥಿತಿ ಚಿಂತಾಜನಕ

ಅದೇ ಸಮಯದಲ್ಲಿ, ಒಡಿಶಾದ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಪೊಲೀಸ್ ಎಎಸ್ಐ ಗೋಪಾಲ್ ದಾಸ್ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಸಬ್ ಇನ್ಸ್ ಪೆಕ್ಟರ್ ಗೋಪಾಲ್ ದಾಸ್ ಅವರನ್ನು ಗಾಂಧಿ ಚೌಕ್ ನಲ್ಲಿ ನಿಯೋಜಿಸಲಾಗಿತ್ತು. ಎಎಸ್‌ಐ ಗೋಪಾಲ್ ದಾಸ್ ಅವರು ತಮ್ಮ ಸರ್ವೀಸ್ ರಿವಾಲ್ವರ್‌ನಿಂದ ಸಚಿವ ನಬಾ ದಾಸ್ ಮೇಲೆ ಗುಂಡು ಹಾರಿಸಿದ್ದಾರೆ. ಮತ್ತೊಂದೆಡೆ, ಪ್ರಸ್ತುತ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಎಸ್ಪಿ ಗುಪ್ತೇಶ್ವರ ಭೋಯ್ ಹೇಳಿದ್ದಾರೆ. ಸಚಿವ ನಬಾ ದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

Odisha Health Minister Naba Kishore Das sustained injuries after being shot

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ