ಅಜಯ್ ಕುಮಾರ್ ಮಿಶ್ರಾ ವಜಾಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯ
ಕೇಂದ್ರ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ನವದೆಹಲಿ: ಕೇಂದ್ರ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಅವರು ಇಂದು ಲೋಕಸಭೆಯಲ್ಲಿ ಲಖೀಂಪುರ ಘಟನೆ ಪ್ರಕರಣದಲ್ಲಿ ಸಚಿವ ಅಜಯ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಮುಂದೂಡಿಕೆ ನಿರ್ಣಯ ಮಂಡಿಸಿದರು. ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು.
ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದ್ದಾರೆ.
ಪೂರ್ವಯೋಜಿತ ಸಂಚು ರೂಪಿಸಿ ರೈತರ ಮೇಲೆ ವಾಹನ ಚಲಾಯಿಸಿರುವುದು ಎಸ್ಐಟಿ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಕ್ಷಮೆಯಾಚಿಸಬೇಕು ಎಂದು ಪ್ರಧಾನಿ ಮೋದಿಗೆ ರಾಹುಲ್ ಆಗ್ರಹಿಸಿದ್ದಾರೆ.
Follow Us on : Google News | Facebook | Twitter | YouTube