ಲಡಾಖ್ ಅಪಘಾತದಲ್ಲಿ ಸೇನಾ ಯೋಧರು ಹುತಾತ್ಮ: ರಾಹುಲ್ ಗಾಂಧಿ ಸಂತಾಪ
ಲಡಾಖ್ನಲ್ಲಿ ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದು ಸೇನಾ ಯೋಧರು ಮೃತಪಟ್ಟ ಬಗ್ಗೆ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ
ನವದೆಹಲಿ: ಲಡಾಖ್ನಲ್ಲಿ ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದು, ಅಪಘಾತದಲ್ಲಿ ಏಳು ಯೋಧರು ಹುತಾತ್ಮರಾಗಿದ್ದಾರೆ. 19 ಯೋಧರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಯೋಧರು ಸಾವಿಗೀಡಾದ ವಿಚಾರವಾಗಿ ಮಾಜಿ ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ರಾಹುಲ್ ಗಾಂಧಿ… ಲಡಾಖ್ನಲ್ಲಿ ಭಾರತೀಯ ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ ಎಂದು ಕೇಳಿ ನನಗೆ ದುಃಖವಾಯಿತು. ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ…. ಎಂದಿದ್ದಾರೆ.
Follow Us on : Google News | Facebook | Twitter | YouTube