ತೆಲುಗು ಹಿರಿಯ ನಟ ಕೃಷ್ಣಂ ರಾಜು ನಿಧನ

ಹಿರಿಯ ನಟ ಹಾಗೂ ಮಾಜಿ ಕೇಂದ್ರ ಸಚಿವ ರೆಬೆಲ್ ಸ್ಟಾರ್ ಕೃಷ್ಣಂ ರಾಜು ನಿಧನರಾಗಿದ್ದಾರೆ

ಹೈದರಾಬಾದ್: ಹಿರಿಯ ನಟ ಹಾಗೂ ಮಾಜಿ ಕೇಂದ್ರ ಸಚಿವ ರೆಬೆಲ್ ಸ್ಟಾರ್ ಕೃಷ್ಣಂ ರಾಜು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ 3.25ಕ್ಕೆ ಕೊನೆಯುಸಿರೆಳೆದರು.

ಅವರು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತೂರಿನಲ್ಲಿ ಜನವರಿ 20, 1940 ರಂದು ಜನಿಸಿದರು. ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಟ್ಟರೂ ಖಳನಟನಾಗಿಯೂ ರಂಜಿಸಿದರು. ಅವರ ನಿಧನಕ್ಕೆ ಅನೇಕ ಸಿನಿ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Rebel Star Krishnam Raju Died in AIG Hospital Hyderabad

ತೆಲುಗು ಹಿರಿಯ ನಟ ಕೃಷ್ಣಂ ರಾಜು ನಿಧನ - Kannada News

ಇದನ್ನೂ ಓದಿ : ವೆಬ್ ಸ್ಟೋರೀಸ್

Follow us On

FaceBook Google News