CM KCR Hospitalised: ತೆಲಂಗಾಣ ಮುಖ್ಯಮಂತ್ರಿ ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲು
CM KCR Hospitalised (ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲು): ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ
CM KCR Hospitalised (ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲು): ತೆಲಂಗಾಣ ಮುಖ್ಯಮಂತ್ರಿ (Telangana CM KCR) ಕೆ. ಚಂದ್ರಶೇಖರ್ ರಾವ್ ಅವರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ (ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್) ಅವರನ್ನು ಭಾನುವಾರ ಅನಾರೋಗ್ಯದ ನಂತರ ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ (AIG Hospital in Hyderabad). ಚಿಕಿತ್ಸೆ ಮುಂದುವರಿದಿದೆ.
ಈ ಕುರಿತು ಎಐಜಿ ಆಸ್ಪತ್ರೆ, “ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರನ್ನು ಭಾನುವಾರ ಬೆಳಿಗ್ಗೆ ಅನಿರೀಕ್ಷಿತ ಹೊಟ್ಟೆಯ ಕಾಯಿಲೆಯ ಹಿನ್ನೆಲೆಯಲ್ಲಿ ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಆರಂಭಿಸಲಾಗಿದೆ.” ಎಂದು ತಿಳಿಸಿದ್ದಾರೆ.
ಸದ್ಯ ಮುಖ್ಯಮಂತ್ರಿಗಳು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸಿಎಂಗೆ ಹೊಟ್ಟೆನೋವು ಕಾಣಿಸಿಕೊಂಡ ನಂತರ ಅವರ ಅಧಿಕೃತ ನಿವಾಸ ಪ್ರಗತಿ ಭವನದಿಂದ ಗಚಿಬೌಲಿಯ ಎಐಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಪ್ರಕಾರ, ಎಂಡೋಸ್ಕೋಪಿ ಮತ್ತು ಸಿಟಿ ಸ್ಕ್ಯಾನ್ನಂತಹ ಪರೀಕ್ಷೆಗಳನ್ನು ಮಾಡಲಾಗಿದ್ದು, ಕೆಸಿಆರ್ಗೆ ಹೊಟ್ಟೆ ಹುಣ್ಣು ಇರುವುದು ಕಂಡುಬಂದಿದೆ.
Telangana CM KCR was taken to AIG Hospitals in Hyderabad on Sunday morning after experiencing unexpected abdominal discomfort. He has developed a small ulcer in his stomach, and treatment has been initiated. His all other parameters are normal: AIG Hospitals
(File Pic) pic.twitter.com/C79cN0Toqg
— ANI (@ANI) March 12, 2023
ಸಿಎಂ ಅವರ ಇತರ ಪರೀಕ್ಷಾ ಫಲಿತಾಂಶಗಳು ಸಹಜ ಸ್ಥಿತಿಗೆ ಬಂದಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಡಾ ಡಿ ನಾಗೇಶ್ವರ ರೆಡ್ಡಿ ಅವರ ನೇತೃತ್ವದಲ್ಲಿ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಎಐಜಿ ಆಸ್ಪತ್ರೆಯ ವೈದ್ಯರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Telangana CM KCR Hospitalised in AIG Hospital in Hyderabad on Sunday
Follow us On
Google News |