Chhattisgarh: ಛತ್ತೀಸ್ಗಢ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವು
ಬಿಲಾಸ್ಪುರ/ಛತ್ತೀಸ್ಗಢ : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್ ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಇಬ್ಬರು ಯುವಕರಾದ ಚಂದ್ರಶೇಖರ ಗಂಧರ್ವ (23) ಮತ್ತು ಪಂಚರಾಮ ಗಂಧರ್ವ (25) ಸಾವನ್ನಪ್ಪಿದ್ದಾರೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಸರೈಪಾಲಿ ಗ್ರಾಮದ ನಿವಾಸಿ ಚಂದ್ರಶೇಖರ್ ಶುಕ್ರವಾರ ಬೆಳಿಗ್ಗೆ ತನ್ನ ಸಹೋದರನನ್ನು ಪೆಂಡ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ತನ್ನ ಸಂಬಂಧಿಯೊಂದಿಗೆ ಹಿಂತಿರುಗುತ್ತಿದ್ದರು ಎಂದು ಅವರು ಹೇಳಿದರು.
ಬೆಳಗ್ಗೆ ಒಂಬತ್ತರ ಸುಮಾರಿಗೆ ಅವರ ಬೈಕ್ ದರ್ಸಾಗರ್ ಚೌಕ್ ಬಳಿ ಟ್ರಕ್ ವೊಂದಕ್ಕೆ ಡಿಕ್ಕಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Two youths died in a road accident in Chhattisgarh