ಇಂತಹ ರೈತರ ಮಕ್ಕಳ ಖಾತೆಗೆ ಜಮಾ ಆಗುತ್ತದೆ 11,000 ರೂಪಾಯಿ, ತಕ್ಷಣ ಅಪ್ಲೈ ಮಾಡಿ
Education scholarship : ದೇಶದಲ್ಲಿ ವಾಸಿಸುವ ರೈತರಿಗೆ (farmers) ಅನುಕೂಲವಾಗುವ ಹಲವು ಯೋಜನೆಗಳು ಜಾರಿಯಲ್ಲಿ ಇದ್ದು ರೈತರ ಮಕ್ಕಳು ಉತ್ತಮ ಉನ್ನತ ಶಿಕ್ಷಣ ಪಡೆದುಕೊಳ್ಳುವುದಕ್ಕೂ ಕೆಲವು ಪ್ರಮುಖ ಯೋಜನೆಗಳು ಸಹಕಾರಿಯಾಗಿದೆ.
ಇದೀಗ ರಾಜ್ಯ ಸರ್ಕಾರ ರೈತರ ಮಕ್ಕಳಿಗೆ ವಿಶೇಷ ಸ್ಕಾಲರ್ಶಿಪ್ (scholarships) ಪರಿಚಯಿಸಿದ್ದು ಈ ಮೂಲಕ ಕೃಷಿ ಮಾಡಿ ಜೀವನ ನಡೆಸುವ ಕುಟುಂಬದ ವಿದ್ಯಾರ್ಥಿಗಳು ಕೂಡ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಸಹಾಯಕವಾಗುವುದು.

ಗೃಹಲಕ್ಷ್ಮಿ ಸ್ಟೇಟಸ್ ತಿಳಿಯಲು ಹೊಸ ಲಿಂಕ್ ಬಿಡುಗಡೆ! ಹಣ ಬಂತಾ ಚೆಕ್ ಮಾಡಿಕೊಳ್ಳಿ
ರೈತ ಮಕ್ಕಳಿಗಾಗಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್! (Ritha vidyanidhi scholarship)
ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಅನ್ನು 2021 ರಲ್ಲಿ ವಿತರಣೆ ಮಾಡಲು ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಕ್ಕೆ ತಂದಿದೆ. ಇದೆ 2024ರಲ್ಲಿ ವರ್ಷದ ಆರಂಭದಲ್ಲಿ ಘೋಷಿಸಲಾದ ಬಜೆಟ್ ನಲ್ಲಿ ಸರ್ಕಾರ ಹಣವನ್ನು ಮೀಸಲಿಟ್ಟಿದೆ.
ಈಗಾಗಲೇ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದರಿಂದ ಸಹಾಯವಾಗಿದೆ. ಯಾರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎನ್ನುವ ಮಾಹಿತಿಯನ್ನು ನೋಡೋಣ.
ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾನದಂಡಗಳು
* ರೈತ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಸಿಗುತ್ತದೆ ಈ ಸ್ಕಾಲರ್ಶಿಪ್.
* ಕರ್ನಾಟಕದ ನಿವಾಸಿ ಆಗಿರಬೇಕು
* ಕುಟುಂಬದ ಆದಾಯ ವಾರ್ಷಿಕ ಎರಡುವರೆ ಲಕ್ಷಕ್ಕಿಂತ ಹೆಚ್ಚಿರಬಾರದು
* ರೈತ ಕುಟುಂಬದ ಎಂಟನೇ ತರಗತಿಯಿಂದ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ರೇಷನ್ ಕಾರ್ಡ್ ನಲ್ಲಿ ಮಿಸ್ ಆಗಿರೋ ಕುಟುಂಬ ಸದಸ್ಯರ ಹೆಸರು ಸೇರಿಸಿಕೊಳ್ಳಲು ಅವಕಾಶ!
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು
* ವಿದ್ಯಾರ್ಥಿಗಳು ಯಾವ ತರಗತಿಗೆ ಸೇರಿದ್ದಾರೆ ಎನ್ನುವುದಕ್ಕೆ ಪ್ರವೇಶ ದಾಖಲಾತಿ.
* ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
* ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಆದಾಯ ಪ್ರಮಾಣ ಪತ್ರ
* ಬ್ಯಾಂಕ್ ಖಾತೆಯ ವಿವರ
* ಪಾಸ್ ಪೋರ್ಟ್ ಅಳತೆಯ ಫೋಟೋ
ಏಪ್ರಿಲ್ ತಿಂಗಳ ಅನ್ನಭಾಗ್ಯ ಯೋಜನೆಯ 680 ರೂ. ಜಮಾ! ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ?
ರೈತ ಕುಟುಂಬದ ವಿದ್ಯಾರ್ಥಿಗಳು 2,500 ಗಳಿಂದ 12,000 ರೂಪಾಯಿಗಳ ಬಗ್ಗೆ ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ ಸ್ಕಾಲರ್ಶಿಪ್ ಹಣ ಪಡೆಯಬಹುದು. ಇದಕ್ಕೆ ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ಸೈಟ್ https://ssp.postmatric.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಗೃಹಜ್ಯೋತಿ ಯೋಜನೆ ಇದ್ರೂ ಸಹ ಕರೆಂಟ್ ಬಿಲ್ ಬಂತಾ? ಕೂಡಲೇ ಈ ರೀತಿ ಮಾಡಿ
11,000 rupees will be credited to the account of such farmer’s children