ಹಿಜಾಬ್ ವಿವಾದ.. 23 ವಿದ್ಯಾರ್ಥಿಗಳ ಅಮಾನತು
ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ 23 ವಿದ್ಯಾರ್ಥಿಗಳನ್ನು ಉಪ್ಪಿನಗುಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಬೆಂಗಳೂರು (Bengaluru): ಕರ್ನಾಟಕದಲ್ಲಿ ಹಿಜಾಬ್ ವಿವಾದ (Hijab Row) ಇನ್ನೂ ಮುಂದುವರೆದಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ 23 ವಿದ್ಯಾರ್ಥಿಗಳನ್ನು ಉಪ್ಪಿನಗುಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿದ್ದರು. ಕಾಲೇಜು ಆಡಳಿತ ಮಂಡಳಿ ಸೋಮವಾರ ಎಲ್ಲರನ್ನೂ ಅಮಾನತು ಮಾಡಿದೆ.
ಎಲ್ಲಾ ವಿದ್ಯಾರ್ಥಿಗಳು ಒಂದು ವಾರದವರೆಗೆ ಕಾಲೇಜಿಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಈ ವರ್ಷ ಮಾರ್ಚ್ನಲ್ಲಿ ಕರ್ನಾಟಕ ಹೈಕೋರ್ಟ್ ವಿವಾದದ ಕುರಿತು ಆದೇಶಗಳನ್ನು ಹೊರಡಿಸಿದ್ದರೂ, ವಿದ್ಯಾರ್ಥಿಗಳು ಮತ್ತೆ ಮತ್ತೆ ಹಿಜಾಬ್ ಧರಿಸಲು ಪಟ್ಟು ಹಿಡಿದಿದ್ದಾರೆ. ಇಸ್ಲಾಂನಲ್ಲಿ ಹಿಜಾಬ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಮತ್ತು ಪ್ರತಿ ಶಿಕ್ಷಣ ಸಂಸ್ಥೆಗಳು ಡ್ರೆಸ್ ಕೋಡ್ ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
23 Girl Students Protested For Wearing Hijab In Class Suspended
Follow us On
Google News |