9ನೇ ಕಂತಿನ ಗೃಹಲಕ್ಷ್ಮಿ ಹಣ ಈ ಜಿಲ್ಲೆಗಳಿಗೆ ಬಿಡುಗಡೆ; ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ!

ಲೋಕಸಭಾ ಎಲೆಕ್ಷನ್ ಹತ್ತಿರ ಬರುತ್ತಿದೆ, ಬೇರೆ ಬೇರೆ ಪಕ್ಷಗಳು ತಮ್ಮ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಅವುಗಳಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನ ತಿಳಿಸಿದ್ದಾರೆ.

ಯಾವ ಪಕ್ಷ ಗೆಲ್ಲುತ್ತೋ ಆ ಪಕ್ಷ ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಈಡೇರಿಸುತ್ತದೆ ಎಂಬುದನ್ನು ಕಾದು ನೋಡಬೇಕು. ಆದರೆ ಅದಕ್ಕಿಂತ ಮುಂಚೆ ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಎಲೆಕ್ಷನ್ ನಡೆದ ಸಂದರ್ಭದಲ್ಲಿ ಹೊರಡಿಸಲಾಗಿದ್ದ ಪ್ರಣಾಳಿಕೆ ಬರವಸೆಯಂತೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಇಂದಿಗೂ ಜನರ ದೃಷ್ಟಿಯಲ್ಲಿ ಪ್ರಶಂಸೆಯನ್ನು ಗಳಿಸಿಕೊಂಡಿದೆ.

ಅದರಲ್ಲೂ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಮಹಿಳೆಯರಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟಿದೆ ಎನ್ನಬಹುದು.

ರೇಷನ್ ಕಾರ್ಡ್ ಸಂಬಂಧಪಟ್ಟಂತೆ ಹೊಸ ಅಪ್ಡೇಟ್; ಇಂತಹವರಿಗೆ ಸಿಗೋಲ್ಲ ಕಾರ್ಡ್

ಹೌದು, ಮನೆಯಲ್ಲೇ ಇರುವ ಮಹಿಳೆಯರು ಅದರಲ್ಲೂ ಹಳ್ಳಿ ಪ್ರದೇಶದಲ್ಲಿ ವಾಸಿಸುವ ಮಹಿಳೆಯರು ಪ್ರತಿ ತಿಂಗಳು ಹಣಕಾಸಿಗಾಗಿ ಪರದಾಡುವ ಪರಿಸ್ಥಿತಿ ಇತ್ತು. ಆದರೆ ಇಂದು ಸಾಕಷ್ಟು ಮಹಿಳೆಯರು ಸರಕಾರದಿಂದ ಪ್ರತಿ ತಿಂಗಳು 2000 ಗಳನ್ನ ಪಡೆದುಕೊಳ್ಳುತ್ತಿದ್ದಾರೆ.

ಇದು ಹಲವರಿಗೆ ಗುಡ್ ನ್ಯೂಸ್ ಆದ್ರೂ ಇನ್ನು ಸಾಕಷ್ಟು ಮಹಿಳೆಯರು ಅರ್ಜಿ ಸಲ್ಲಿಸಿದ ನಂತರವೂ ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಸರ್ಕಾರದ ವಿರುದ್ಧ ದೂರು ಸಲ್ಲಿಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi hebbalkar ) ಪೆಂಡಿಂಗ್ (pending amount) ಇರುವ ಹಣವನ್ನು ಕೂಡ ಜಮಾ ಮಾಡುವುದಾಗಿ ಭರವಸೆ ನೀಡಿದ್ದರು ಅದರ ಪ್ರಕಾರ ಕೆಲವರಿಗೆ ಹಣ ಬಂದಿದೆ ಎಂದು ವರದಿಯಾಗಿದೆ.

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೊರಬಿತ್ತು ಹೊಸ ಅಪ್ಡೇಟ್! ಜಮಾ ಆಗಲಿದೆ ಪೆಂಡಿಂಗ್ ಹಣ

Gruha Lakshmi Yojana9ನೇ ತರಗತಿನ ಹಣ ಬಿಡುಗಡೆ!

ಈಗಾಗಲೇ ಎಂಟು ಕಂತುಗಳಲ್ಲಿ 16,000ಗಳನ್ನು ಗೆಲುವು ಮಹಿಳೆಯರು ಪಡೆದುಕೊಂಡಿದ್ದಾರೆ, ಇದೀಗ ಸರ್ಕಾರ ತಿಳಿಸಿರುವ ಮಾಹಿತಿಯ ಪ್ರಕಾರ 9ನೇ ಕಂತಿನ ಹಣ ಬಹಳ ಬೇಗ ಬಿಡುಗಡೆ ಮಾಡಲಾಗುತ್ತಿದ್ದು, ಮೊದಲ ವಾರದಲ್ಲಿಯೇ ಮಹಿಳೆಯರ ಖಾತೆಯನ್ನು ತಲುಪಲಿದೆ. ಹಂತ ಹಂತವಾಗಿ ಒಂದೊಂದೇ ಜಿಲ್ಲೆಗೆ ಹಣ ವರ್ಗಾವಣೆ ಆಗುತ್ತದೆ ಹಾಗಾದರೆ ಮೊದಲ ಹಂತದಲ್ಲಿ ಯಾವ ಜಿಲ್ಲೆಗಳಿಗೆ 9ನೇ ಕಲ್ಲಿನ ಹಣ ಜಮಾ ಆಗಲಿದೆ ಎನ್ನುವುದನ್ನು ನೋಡುವುದಾದರೆ,

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೊರಬಿತ್ತು ಹೊಸ ಅಪ್ಡೇಟ್! ಜಮಾ ಆಗಲಿದೆ ಪೆಂಡಿಂಗ್ ಹಣ

ಮಂಡ್ಯ
ಚಾಮರಾಜನಗರ
ಕೋಲಾರ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶ
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ಉಡುಪಿ
ಚಿಕ್ಕಮಂಗಳೂರು
ಮೈಸೂರು
ಚಿಕ್ಕಬಳ್ಳಾಪುರ

ಎರಡನೇ ಹಂತದಲ್ಲಿ ಯಾವ ಜಿಲ್ಲೆಗಳಿಗೆ ಹಣ ಬಿಡುಗಡೆ ಆಗಲಿದೆ ಎನ್ನುವುದನ್ನು ನೋಡುವುದಾದರೆ,

ಅನ್ನಭಾಗ್ಯ ಹಣ ಜಮಾ ಆಗಿದ್ಯಾ ಎಂದು ಚೆಕ್ ಮಾಡುವುದಕ್ಕೆ ಇಲ್ಲಿದೆ ಡೈರೆಕ್ಟ್ ಲಿಂಕ್!

ಉತ್ತರ ಕನ್ನಡ
ಗದಗ
ಹಾವೇರಿ
ಬಾಗಲಕೋಟೆ
ಧಾರವಾಡ
ಬಿಜಾಪುರ
ಶಿವಮೊಗ್ಗ
ದಾವಣಗೆರೆ
ಬಳ್ಳಾರಿ
ಕೊಪ್ಪಳ
ಮೊದಲಾದ ಜಿಲ್ಲೆಗಳು.

ದಾಖಲೆಗಳನ್ನು ಸರಿಪಡಿಸಿಕೊಂಡರೆ ಮಾತ್ರ ಹಣ ಜಮಾ!

ತುಂಬಾ ವರ್ಷದ ಹಳೆಯ ಬ್ಯಾಂಕ್ ಖಾತೆಯನ್ನು ನೀವು ಹೊಂದಿದ್ದರೆ ಅದಕ್ಕೆ ಅಗತ್ಯವಿರುವ, EKYC ಅಪ್ಡೇಟ್ ಆಧಾರ್ ಕಾರ್ಡ್ ಲಿಂಕ್ ಮೊದಲಾದವುಗಳನ್ನು ಮಾಡಿಕೊಳ್ಳಬೇಕು. ಇದಕ್ಕಾಗಿ ನೀವು ನೇರವಾಗಿ ಬ್ಯಾಂಕಿಗೆ ಹೋಗಿ ಬ್ಯಾಂಕ್ ಸಿಬ್ಬಂದಿಗಳ ಬಳಿ ನಮ್ಮ ಖಾತೆಗೆ ಹಣ ಬರುತ್ತಿಲ್ಲ ಎಂದು ಹೇಳಿದರೆ ನಿಮ್ಮ ಖಾತೆಯಲ್ಲಿ (Bank Account) ಯಾವುದೇ ಸಮಸ್ಯೆ ಇದ್ದರೆ ಅದನ್ನ ಪರಿಹರಿಸಿ ಕೊಡುತ್ತಾರೆ.

ಅಥವಾ ನೀವು ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ನಿಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು. ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡರೆ ನಿಮ್ಮ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಜಮಾ ಆಗಲು ಆರಂಭವಾಗುತ್ತದೆ.

9th installment of Gruha Lakshmi money released to these districts

About Author:

Kannada News Today

Kannada News Today Providing News, information & entertainment in Kannada Language, Since 2019. This Website reacts as a…🔸ಇನ್ನಷ್ಟು ಓದಿ »

Related Stories