Karnataka NewsBangalore News

ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರೇ ಮೊದಲು ಅಕೌಂಟ್ ಚೆಕ್ ಮಾಡಿಕೊಳ್ಳಿ!

ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಹಣ ವರ್ಗಾವಣೆ ದಿನದಿಂದ ದಿನಕ್ಕೆ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿದೆ. ಯಾಕಂದ್ರೆ ಮಹಿಳೆಯರು ತಮ್ಮ ಖಾತೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಎಲ್ಲಾ ಅಪ್ಡೇಟ್ ಆಗಿದೆ ಎಂದು ಹೇಳಿದರು ಅವರ ಖಾತೆಗೆ (Bank Account) ಹಣ ಜಮಾ ಆಗುತ್ತಿಲ್ಲ.

ಆರಂಭದಲ್ಲಿ ಒಂದೆರಡು ಕಂತಿನ ಹಣ ಬಂದಿತ್ತು ಆದರೆ ನಂತರದ ದಿನಗಳಲ್ಲಿ ಹಣ ಬಿಡುಗಡೆ ಆಗಿಲ್ಲ ಎಂದು ಸಾಕಷ್ಟು ಮಹಿಳೆಯರು ದೂರುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹಿಳೆಯರು ತಕ್ಷಣ ಈ ಕೆಲಸ ಮಾಡಿ, ಇದರಿಂದ ನಿಮ್ಮ ಖಾತೆಗೂ ಹಣ ಬರುತ್ತೆ ಎಂದು ಸೂಚನೆ ನೀಡಿದ್ದಾರೆ.

Gruha Lakshmi money received only 2,000, Update About Pending Money

ಬಿಪಿಎಲ್ ಕಾರ್ಡುದಾರರಿಗೆ ಆತಂಕ; ಇಂಥವರಿಗೆ ಇನ್ಮುಂದೆ ಗ್ಯಾರಂಟಿ ಯೋಜನೆಯ ಹಣ ಬರಲ್ಲ!

ಆಶಾ ಕಾರ್ಯಕರ್ತೆಯರ ಸಹಾಯ ಪಡೆದುಕೊಳ್ಳಿ!

ನಿಮ್ಮ ಬಳಿ ಆಧಾರ್ ಕಾರ್ಡ್ (Aadhaar card) ಇದ್ದು ಬ್ಯಾಂಕ್ ಖಾತೆ ಆರಂಭಿಸಿ ಸಾಕಷ್ಟು ವರ್ಷಗಳೇ ಕಳೆದಿದ್ದರೆ, ನಿಮ್ಮ ಖಾತೆಗೆ ಹಣ ಬರಬೇಕು ಅಂದ್ರೆ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು.

ಅದರ ಜೊತೆಗೆ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಕೂಡ ಅಷ್ಟೇ ಮುಖ್ಯ. ಬ್ಯಾಂಕ್ ಖಾತೆ ಆಕ್ಟಿವ್ (bank account active) ಆಗಿರದೆ ಇದ್ದರೆ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರು ಬ್ಯಾಂಕ್ನಿಂದ ನಿಮ್ಮ ಖಾತೆಗೆ ಹಣ ಬರುವುದಿಲ್ಲ ಹಾಗಾಗಿ ನೀವು ಬ್ಯಾಂಕಿಗೆ ಹೋಗಿ ಸಿಬ್ಬಂದಿಗಳನ್ನು ಭೇಟಿ ಮಾಡಿ ನಿಮ್ಮ ಖಾತೆಯಲ್ಲಿ ಇರುವ ಸಮಸ್ಯೆಯನ್ನು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಅಗತ್ಯ ಇರುವ ಎಲ್ಲಾ ಅಪ್ಡೇಟ್ ಮಾಡಿಸಿಕೊಳ್ಳಬೇಕು.

ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್! ಕೂಡಲೇ ಬ್ಯಾಂಕ್ ಹೋಗಿ ಅಪ್ಡೇಟ್ ಮಾಡಿಕೊಳ್ಳಿ

Gruha Lakshmi Yojanaಆಶಾಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ಕಾಂಗ್ರೆಸ್ ಸರ್ಕಾರದ ಯೋಜನೆ ಪ್ರತಿಯೊಬ್ಬ ಮಹಿಳೆಯರಿಗೆ ತಲುಪುವಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ.

ಹಣ ಬಾರದೆ ಇರುವ ಮಹಿಳೆಯರು ಅವರ ಸಹಾಯವನ್ನು ಪಡೆದುಕೊಂಡು ಬ್ಯಾಂಕ್ ಖಾತೆಯಿಂದ ಹಿಡಿದು ಅರ್ಜಿ ಸಲ್ಲಿಸುವವರಿಗೆ ಎಲ್ಲಿ ಸಮಸ್ಯೆಯಾಗಿದೆ ಎಂಬುದನ್ನ ಕಂಡು ಹಿಡಿದುಕೊಳ್ಳಲು ಸಾಧ್ಯವಿದೆ.

ಇಂಥವರ ರೇಷನ್ ಕಾರ್ಡ್ ರದ್ದು; ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಹಣವೂ ಬರಲ್ಲ!

ಸಮಸ್ಯೆ ಮೂಲ ಗೊತ್ತಾದ್ರೆ ಅದಕ್ಕೆ ಪರಿಹಾರ ಕಂಡುಹಿಡಿಯುವುದು ದೊಡ್ಡ ವಿಚಾರವಲ್ಲ, ಹಾಗಾಗಿ ನಿಮ್ಮ ಖಾತೆಯಲ್ಲಿ ಅಥವಾ ನಿಮ್ಮ ಅರ್ಜಿಯಲ್ಲಿ ಸಮಸ್ಯೆ ಇದೆ ಎಂಬುದನ್ನು ಗುರುತಿಸಿ ಒಂದು ವೇಳೆ ಅರ್ಜಿಯಲ್ಲಿಯೇ ಸಮಸ್ಯೆ ಇದ್ದರೆ ಮತ್ತೆ ಹೊಸದಾಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವುದಕ್ಕೂ ಅವಕಾಶ ಇದೆ.

ಈ ರೀತಿ ನೀವು ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಇಲ್ಲಿಯವರೆಗೆ ಬಿಡುಗಡೆಯಾದ ಹಣ ನಿಮ್ಮ ಖಾತೆಗೆ ಬರುವುದಿಲ್ಲ. ಆದರೆ ಮುಂದಿನ ತಿಂಗಳಿನಿಂದ ನಿಮ್ಮ ಖಾತೆಗೆ ತಪ್ಪದೆ ಹಣ ಜಮಾ ಆಗುತ್ತದೆ. ಈಗಾಗಲೇ ಏಳು ಕಂತಿನ ಹಣ ಬಿಡುಗಡೆ ಆಗಿದೆ. 8ನೇ ಕಂತಿನ ಹಣ ಏಪ್ರಿಲ್ 20ರ ನಂತರ ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದೆ.

ನಿಮ್ಮ ಕೃಷಿ ಜಮೀನಿಗೆ ಹೋಗಲು ಅಕ್ಕಪಕ್ಕದವರು ದಾರಿ ಬಿಡುತ್ತಿಲ್ವಾ? ಬಂತು ಹೊಸ ರೂಲ್ಸ್

Big Update on Gruha Lakshmi Yojana beneficiary women’s

Our Whatsapp Channel is Live Now 👇

Whatsapp Channel

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories