Karnataka News

ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮದಾಪುರ ಬಳಿ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

Publisher: Kannada News Today (Digital Media)

  • ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
  • ಘಟನೆಯ ಬಳಿಕ ಕಾರು ಚಾಲಕನನ್ನು ಪೊಲೀಸರು ಹಿಡಿದಿದ್ದಾರೆ
  • ಬೈಕ್ ಸವಾರನನ್ನು ನಾಗರಾಜು (55) ಎಂದು ಗುರುತಿಸಲಾಗಿದೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಿಂದ ಚಿತ್ರದುರ್ಗ ಕಡೆಗೆ ಹೋಗುತ್ತಿದ್ದ ಬೈಕ್ ಸವಾರನೊಬ್ಬನಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೂಡ್ಲಿಗಿ ತಾಲೂಕಿನ ಇಮದಾಪುರ ಗ್ರಾಮದ ಬಳಿ ನಡೆದಿದೆ.

ಕೂಡ್ಲಿಗಿ ತಾಲೂಕಿನ ಅಯ್ಯನಹಳ್ಳಿ ಗ್ರಾಮದ ನಾಗರಾಜು (55) ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಕಾರನ್ನು ಪತ್ತೆಹಚ್ಚಿ ಚಿತ್ರದುರ್ಗ ಜಿಲ್ಲೆಯ (Chitradurga district)  ಮೂಡಲಮಚಿಕೆರೆ ಗ್ರಾಮದ ಬಳಿ ವಶಪಡಿಸಿಕೊಂಡರು.

ಘಟನೆಯಾದ ತಕ್ಷಣ ಸ್ಥಳೀಯರು ನೆರವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಪತ್ತೆ ಹಚ್ಚಿದ ಪೊಲೀಸರು ಮೂಡಲಮಾಚಿಕೆರೆಯ ಬಳಿ (Mudalamachikere village) ಕಾರನ್ನು ವಶಪಡಿಸಿಕೊಂಡು, ಚಾಲಕನನ್ನು ವಿಚಾರಣೆಗೆ ತೆಗೆದುಕೊಂಡಿದ್ದಾರೆ.

ಕಾನಹೊಸಹಳ್ಳಿ ಎಸ್‌ಐ ಸಿದ್ರಾಮ್ ಬಿದ್ರಾನಿ ಸ್ಥಳ ಪರಿಶೀಲನೆ ನಡೆಸಿ ಕಾರು ಚಾಲಕನನ್ನು ವಶಕ್ಕೆ ಪಡೆದರು. ಘಟನೆಗೆ ಸಂಬಂಧಿಸಿದಂತೆ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bike Rider Dies After Car Hits From Behind

English Summary

Our Whatsapp Channel is Live Now 👇

Whatsapp Channel

Related Stories