ಈ ಮಿಸ್ಟೇಕ್ ಮಾಡಿದ್ರೆ, ಗೃಹಲಕ್ಷ್ಮಿ ಯೋಜನೆ ಹಣ ಬಂದ್ರೂ ಖಾತೆಯಲ್ಲಿ ಇರೋಲ್ಲ
ಪ್ರತಿಯೊಬ್ಬ ಫಲಾನುಭವಿ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆ (Gruha Lakshmi Yojana) 7ನೆ ಕಂತಿನ ಹಣ ಬಿಡುಗಡೆಗಾಗಿ ಕಾಯುತ್ತಿದ್ದಾರೆ. 6ನೇ ಕಂತಿನ ಹಣವನ್ನು ಫೆಬ್ರವರಿ 13 ರಿಂದ ಬಿಡುಗಡೆ ಮಾಡಲಾಗಿತ್ತು.
ಏಳನೇ ಕಂತಿನ ಹಣವನ್ನು ಮಾರ್ಚ್ 3ನೇ ವಾರದಲ್ಲಿ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ. ಇನ್ನು ಕೆಲವು ಜಿಲ್ಲೆಗಳಿಗೆ ಬಿಡುಗಡೆ ಆಗಿದ್ದು ಆ ಜಿಲ್ಲೆಗಳ ಹೆಸರು ಇಂತಿದೆ.
ಇನ್ಮುಂದೆ ಇಂತಹವರಿಗೆ ಸಿಗೋಲ್ಲ ಉಚಿತ ಕರೆಂಟ್! ಕಟ್ಟಬೇಕು ಸಂಪೂರ್ಣ ವಿದ್ಯುತ್ ಬಿಲ್
ರಾಜ್ಯದ ಈ ಜಿಲ್ಲೆಗಳಿಗೆ ಏಳನೇ ಕಂತಿನ ಹಣ ಜಮಾ!
ಶಿವಮೊಗ್ಗ, ಧಾರವಾಡ, ತುಮಕೂರು, ಉತ್ತರ ಕನ್ನಡ, ಯಾದಗಿರಿ, ವಿಜಯಪುರ, ಬೆಳಗಾವಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಕೊಪ್ಪಳ, ಕೋಲಾರ, ಗದಗ, ಇಷ್ಟು ಜಿಲ್ಲೆಗಳಿಗೆ ಎರಡನೇ ಕಂತಿನ ಹಣ ಬಿಡುಗಡೆ ಆಗಿದ್ದು ಸದ್ಯದಲ್ಲಿಯೇ ಪ್ರತಿಯೊಬ್ಬ ಫಲಾನುಭವಿಗಳಿಗೂ ಕೂಡ 7ನೇ ಕಂತಿನ ಹಣ ಸಿಗಲಿದೆ.
ಈ ಕೆಲಸ ಮಾಡುವುದು ಕಡ್ಡಾಯ!
ಎಲ್ಲರಿಗೂ ಸರ್ಕಾರ ಈಗಾಗಲೇ ತಿಳಿಸಿರುವಂತೆ ಎನ್ ಪಿಸಿಐ ಮ್ಯಾಪಿಂಗ್ (npci mapping) ಅಥವಾ ಈ ಕೆವೈಸಿ (E-KYC) ನಿಮ್ಮ ಬ್ಯಾಂಕ್ ಖಾತೆಗೆ (Bank Account) ಆಗದೆ ಇದ್ದರೆ ಹಣ ಜಮಾ ಆಗುವುದಿಲ್ಲ. ಇದಕ್ಕಾಗಿ ನೀವು ತಕ್ಷಣ ಬ್ಯಾಂಕ್ ಶಾಖೆಗೆ ಹೋಗಿ ನಿಮ್ಮ ಖಾತೆಗೆ ಈ ಎಲ್ಲಾ ಅಪ್ಡೇಟ್ ಆಗಿದೆಯೋ ಇಲ್ಲವೋ ಅಂತ ಚೆಕ್ ಮಾಡಿ.
ಮಾರ್ಚ್ 25ರೊಳಗೆ ಈ ಕೆಲ್ಸ ಮಾಡದಿದ್ರೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಸಿಗೋದಿಲ್ಲ
ಇನ್ನು ಎರಡನೆಯದಾಗಿ ಆಧಾರ್ ಕಾರ್ಡ್ ಅಪ್ಡೇಟ್ (Aadhaar update) ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೀವು 10 ವರ್ಷ ಹಳೆಯದಾದ ಆಧಾರ್ ಕಾರ್ಡ್ ಬಳಸುತ್ತಿದ್ದರೆ ತಕ್ಷಣ ಅದರ ಅಪ್ಡೇಟ್ ಮಾಡಿಸಬೇಕು.
ಆಧಾರ್ ಕಾರ್ಡ್ ಸೇವಾ ಕೇಂದ್ರಗಳಲ್ಲಿ ಅಪ್ಡೇಟ್ ಮಾಡಿಸಬಹುದಾಗಿದ್ದು ಇದಕ್ಕೆ ಯಾವ ಶುಲ್ಕವೂ ಇಲ್ಲ. ಸರ್ಕಾರ ಈಗಾಗಲೇ ಆಧಾರ್ ಕಾರ್ಡ್ ಅಪ್ಡೇಟ್ ಗಡುವನ್ನು ಮತ್ತೆ ವಿಸ್ತರಿಸಿದೆ. ಹಾಗಾಗಿ ಜೂನ್ 14 2024ರ ವರೆಗೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬಹುದು.
ಕೃಷಿಭಾಗ್ಯ ಯೋಜನೆಯಲ್ಲಿ ನಿಮಗೂ ಸಹ ಹಣ ಸಿಗುತ್ತಾ? ಈ ರೀತಿ ಚೆಕ್ ಮಾಡಿಕೊಳ್ಳಿ
ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ!
https://mahitikanaja.karnataka.gov.in/department ಈ ವೆಬ್ ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಹಾಕಿ ಗೃಹಲಕ್ಷ್ಮಿ ಸ್ಟೇಟಸ್ ತಿಳಿದುಕೊಳ್ಳಬಹುದು. ಇಲ್ಲಿ ನಿಮ್ಮ ಬ್ಯಾಂಕ್ ಖಾತೆ ಆಕ್ಟಿವ್ ಆಗಿದೆಯೋ ಇಲ್ಲವೋ ಅನ್ನೋದನ್ನ ತಿಳಿದುಕೊಳ್ಳಬಹುದು.
ಹೊಸದಾಗಿ ಅರ್ಜಿ ಸಲ್ಲಿಸಲು ಕೂಡ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಇಲ್ಲಿಯವರಿಗೆ ನಿಮ್ಮ ಖಾತೆಗೆ ಒಂದೇ ಒಂದು ರೂಪಾಯಿ ಕೂಡ ಜನ ಆಗದೆ ಇದ್ದರೆ ಕೆಲವು ತಾಂತ್ರಿಕ ದೋಷಗಳಿಂದಾಗಿ ನಿಮ್ಮ ಅಪ್ಲಿಕೇಶನ್ ಸರಿಯಾಗಿ ಸಬ್ಮಿಟ್ ಆಗದೆ ಇರಬಹುದು, ಇಂತಹ ಸಂದರ್ಭದಲ್ಲಿ ನೀವು ಪುನಃ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸಿ ಮುಂದಿನ ಕಂತಿನ ಹಣ ನಿಮ್ಮ ಖಾತೆಗೆ ಬರುವಂತೆ ಮಾಡಿಕೊಳ್ಳಬಹುದು.
ಮೊದಲು ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ! ಚೆಕ್ ಮಾಡಿಕೊಳ್ಳಿ
ಇನ್ನು ಸರ್ಕಾರದ ಕೆಲವು ಮಾನದಂಡಗಳನ್ನು ಪಾಲಿಸದೆ ಇದ್ದರೆ, ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಆದರೂ ಸಹ, ನಿಮ್ಮ ಖಾತೆಗೆ ಬರುವುದಿಲ್ಲ, ಜೊತೆಗೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಲವೊಮ್ಮೆ ಹಣದ ಬಗ್ಗೆ ಮೆಸೇಜ್ ಬಂದಿದ್ದರು ಖಾತೆಯಲ್ಲಿ ಹಣ ಇರುವುದಿಲ್ಲ. ಅಂತಹ ವೇಳೆ ತಾಳ್ಮೆಯಿಂದ ಕಾದು ನೋಡಿ, ತಿಂಗಳ ಕೊನೆ ಒಳಗೆ ನಿಮಗೆ ಹಣ ಜಮಾ ಆಗಬಹುದು
By This mistake Gruha Lakshmi Yojana money will not be in your Bank Account