Karnataka News

ಮಂಡ್ಯದಲ್ಲಿ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು; ಓರ್ವ ಸಾವು, ಇಬ್ಬರು ನಾಪತ್ತೆ

ವಿಸಿ ನದಿಗೆ ಬಿದ್ದ ಕಾರಿನಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿದ್ದು, ನಯಾಜ್ ಎಂಬ ವ್ಯಕ್ತಿಯನ್ನು ರಕ್ಷಿಸಲಾಯಿತು.

  • ‌ಮಂಡ್ಯದಲ್ಲಿ ಕಾರು ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದ್ದು,
  • ಓರ್ವ ವ್ಯಕ್ತಿ ಸಾವನ್ನಪ್ಪಿದರೆ, ಇಬ್ಬರು ನಾಪತ್ತೆಯಾಗಿದ್ದಾರೆ
  • ‌ಪೊಲೀಸರು ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ
  • ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ವಿಳಂಬ

ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿಯಲ್ಲಿ ಕಾರು ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರೂ ಮಂಡ್ಯದ ಹಾಲಹಳ್ಳಿ ಸ್ಲಂ ನವರಾಗಿದ್ದು, ಘಟನೆ ವೇಳೆ ಕಾರು ಮಾಲೀಕ ಫಯಾಜ್ ಅವರು ಸಾವನ್ನಪ್ಪಿದ್ದಾರೆ.

ಘಟನೆಯ ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿದ್ದು, ನಯಾಜ್ ಎಂಬ ವ್ಯಕ್ತಿಯನ್ನು ರಕ್ಷಿಸಲಾಯಿತು. ಆದರೆ ಇನ್ನಿಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಮಂಡ್ಯದಲ್ಲಿ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು; ಓರ್ವ ಸಾವು, ಇಬ್ಬರು ನಾಪತ್ತೆ

ಪ್ರತ್ಯಕ್ಷದರ್ಶಿಗಳಿಂದ ತಿಳಿದುಬಂದಂತೆ, ಕಾರು ವಿಸಿ ನಾಲೆಗೆ ಬಿದ್ದಿದ್ದಾಗ ಅಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿತ್ತು, ಪರಿಣಾಮವಾಗಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿದೆ. ಈ ಸಂಬಂಧ ಹಾಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶೋಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ.

ಮಂಡ್ಯ ಡಿಸಿ ಡಾ. ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, “5 ಗಂಟೆಗೆ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ನಂತರ ನಾವು ಕಾರು ಮತ್ತು ನಾಪತ್ತೆಯಾಗಿರುವವರನ್ನು ಹುಡುಕಲು ಮುಂದುವರಿಯುತ್ತೇವೆ” ಎಂದು ಹೇಳಿದರು.

Car Accident in Mandya, One Dead, Two Missing

English Summary

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories